Featured

ಅಭಿವೃದ್ಧಿಯನ್ನೇ ಮುಂದಿಟ್ಟು ಕೊಂಡು ಕಾಂಗ್ರೆಸ್‌ ಪಕ್ಷವು ಚುನಾವಣೆ ಎದುರಿಸಲಿದೆ ; ಜನರು ಪಕ್ಷದ ಕೈ ಹಿಡಿಯಲಿದ್ದಾರೆ : ವಿನಯ್‌ ಕುಮಾರ್‌ ಸೊರಕೆ – vishwanews24

ದೇಶದ ಯಾವ ಭಾಗದಲ್ಲೂ ಮೋದಿ ಅಲೆಯಿಲ್ಲ: ಗ್ಯಾರಂಟಿಗಳ ಬಲದಲ್ಲೇ ಕಾಂಗ್ರೆಸ್ ಗೆಲುವು- ಸೊರಕೆ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಭರವಸೆಗಳು ಮತ್ತು ಚುನಾವಣಾ ಪ್ರಣಾಳಿಕೆಯಲ್ಲಿನ ಐದು ‘ನ್ಯಾಯ’ ಗಳ ಅಡಿಯಲ್ಲಿ ನೀಡಿದ 25 ಭರವಸೆಗಳ ಮೇಲೆ ಪಕ್ಷದ ಪ್ರಚಾರ ಕೇಂದ್ರೀಕೃತವಾಗಿರುತ್ತದೆ ಎಂದು ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್‌ ಸೊರಕೆ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಯಾವ ಭಾಗದಲ್ಲೂ ಪ್ರಧಾನಿ ನರೇಂದ್ರ ಮೋದಿ ಅಲೆ ಇಲ್ಲ. ಕಾಂಗ್ರೆಸ್‌ ಪಕ್ಷವು ಗ್ಯಾರಂಟಿಗಳ ಬಲದಲ್ಲೇ ಗೆಲುವು ಸಾಧಿಸಲಿದೆ ಅಭಿವೃದ್ಧಿಯನ್ನೇ ಮುಂದಿಟ್ಟು ಕೊಂಡು ಕಾಂಗ್ರೆಸ್‌ ಪಕ್ಷವು ಚುನಾವಣೆ ಎದುರಿಸಲಿದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ನಾಡಿನ ಜನರ ಹಿತ ರಕ್ಷಿಸುತ್ತಿವೆ. ಅದಕ್ಕೆ ಪ್ರತಿಯಾಗಿ ಜನರು ಕಾಂಗ್ರೆಸ್‌ ಪಕ್ಷದ ಕೈ ಹಿಡಿಯಲಿದ್ದಾರೆ ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಟೀಕಿಸಿದ್ದ ವಿರೋಧ ಪಕ್ಷದವರು ಈಗ ಗ್ಯಾರಂಟಿಗಳ ಮೊರೆ ಹೋಗಿದ್ದಾರೆ. ಬಿಜೆಪಿಯವರ ಬಳಿ ಮತದಾರರಿಗೆ ತಿಳಿಸಲು ಯಾವ ಯೋಜನೆಗಳೂ ಇಲ್ಲ. ಗ್ಯಾರಂಟಿ ಯೋಜನೆಗಳು ಸುಳ್ಳು ಎನ್ನುತ್ತಿರುವ ಬಿಜೆಪಿಗೆ ಜನರು ಈ ಚುನಾವಣೆಯಲ್ಲಿ ಬುದ್ಧಿ ಕಲಿಸುತ್ತಾರೆ ಎಂದು ಹೇಳಿದರು. ಬಿಜೆಪಿ ನಡೆಸುತ್ತಿರುವ ಮಹಿಳಾ ಸಮಾವೇಶಗಳಲ್ಲಿ ಅಭಿ‍ಪ್ರಾಯ ಸಂಗ್ರಹಿಸಲಿ. ರಾಜ್ಯದ ಮಹಿಳೆಯರೆಲ್ಲರೂ ಗ್ಯಾರಂಟಿ ಯೋಜನೆಗಳ ಲಾಭ ಪಡೆದಿರುವುದು ಗೊತ್ತಾಗುತ್ತದೆ ಎಂದರು.

ಮನೆ ಮನೆಗೂ ಗ್ಯಾರಂಟಿ ಯೋಜನೆಗಳ ಮಾಹಿತಿಯುಳ್ಳ ಕಾರ್ಡ್‌ಗಳನ್ನು ವಿತರಿಸಲಾಗುವುದು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ, ಮಹಾಲಕ್ಷ್ಮಿ ಯೋಜನೆ, ಸರ್ಕಾರಿ ಹುದ್ದೆಗಳ ಭರ್ತಿ ಸೇರಿದಂತೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನ ಭರವಸೆಗಳನ್ನೂ ಪ್ರತಿ ಮನೆಗೆ ತಲುಪಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸೊರಕೆ ಹೇಳಿದರು.

‘ಗೃಹ ಲಕ್ಷ್ಮಿ’ ಗ್ಯಾರಂಟಿ ತನ್ನ ಕುಟುಂಬಕ್ಕೆ ಸಹಾಯ ಮಾಡಿದೆ ಎಂದು ದ್ವಿತೀಯ ಪಿಯುಸಿ ರ್ಯಾಂಕ್ ಪಡೆದ ವಿದ್ಯಾರ್ಥಿ ಹೇಳಿಕೊಂಡಿದ್ದಾರೆ ಮತ್ತು ಮಹಿಳೆಯೊಬ್ಬರು ಹಣವನ್ನು ಉಳಿಸಿ ಫ್ರಿಡ್ಜ್ ಖರೀದಿಸಿದ್ದಾರೆ ಎಂದು ಸೊರಕೆ ಗ್ಯಾರಂಟಿ ಯೋಜನೆಗಳ ಪ್ರಯೋಜನಗಳ ಬಗ್ಗೆ ವಿವರಿಸಿದ್ದಾರೆ.

ಮಹಿಳೆಯರು ಉತ್ತಮ ಜೀವನ ನಡೆಸಲು ಸಮರ್ಥರಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಕೊಡುಗೆ ಎಷ್ಟು? ಖಾತ್ರಿಗಳ ಬಗ್ಗೆ ಬಿಜೆಪಿಯವರು ಸುಳ್ಳು ಹೇಳಿದರೆ ಫಲಾನುಭವಿಗಳು ತಕ್ಕ ಪಾಠ ಕಲಿಸುತ್ತಾರೆ ಎಂದರು. ದೇಶದಲ್ಲಿ ಕಾಂಗ್ರೆಸ್ ಪರ ಅಲೆ ಇದ್ದು, ರಾಜ್ಯದಲ್ಲಿ ಪಕ್ಷ 20 ಸ್ಥಾನ ಗೆಲ್ಲಲಿದೆ ಎಂದರು. ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಸಹ ಅಧ್ಯಕ್ಷ ಎಲ್‌. ಹನುಮಂತಯ್ಯ ಮಾತನಾಡಿ, ‘ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹೆದರಿದೆ. ಈ ಕಾರಣದಿಂದ ಗ್ಯಾರಂಟಿ ಯೋಜನೆ ಕುರಿತ ಮಾಹಿತಿಯುಳ್ಳ ಪತ್ರಗಳನ್ನು ವಿತರಿಸದಂತೆ ತಡೆಯಲು ಪ್ರಯತ್ನಿಸುತ್ತಿದೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago