ಮಂಗಳೂರು: ಕಳೆದ ಒಂದೂವರೆ ವರ್ಷಗಳಲ್ಲಿ ಅಭಿವೃದ್ಧಿಯಲ್ಲಿ ಕುಂಟುತ್ತಾ ಮಲಗಿದ್ದ ರಾಜ್ಯ ಸರಕಾರ ಇದೀಗ ಓಡಲು ಆರಂಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಯಡಿಯೂರಪ್ಪ ನೇತೃತ್ವದ ರಾಜ್ಯದ ಬಿಜೆಪಿ ಸರಕಾರ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ‘ನೂರು ದಿನ ನೂರು ಸಾಧನೆ’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಹಲವು ಸವಾಲುಗಳ ಮಧ್ಯೆಯೇ ನೆರೆ ಹಾಗೂ ಬರ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಸಮರ್ಥವಾಗಿ ಎದುರಿಸಿದೆ. 22 ಜಿಲ್ಲೆಗಳ 103 ತಾಲೂಕುಗಳು ಈ ಬಾರಿ ಪ್ರವಾಹ ಪೀಡಿತವಾಗಿದ್ದು, ಮಧ್ಯಂತರ ಪರಿಹಾರವಾಗಿ ಕೇಂದ್ರ ಸರಕಾರ 1200 ಕೋಟಿ ರೂ.ಗಳನ್ನು ನೀಡಿದೆ. ರಾಜ್ಯ ಸರಕಾರ ತಕ್ಷಣ ಸ್ಪಂದನೆ ನೀಡಿ ಸಂತ್ರಸ್ತರಿಗೆ ನೇರವಾಗಿ ಅವರ ಖಾತೆಗೆ ಪರಿಹಾರ ಹಣ ಒದಗಿಸುವಂತೆ ಮಾಡಿದೆ. ಮಾತ್ರವಲ್ಲದೆ, ಮನೆ ಕಳೆದುಕೊಂಡವರಿಗೆ ಮನೆ, ಜಾಗದ ವ್ಯವಸ್ಥೆ ಹಾಗೂ ತಾತ್ಕಾಲಿಕ ಬಾಡಿಗೆ ಮನೆ ಬಾಡಿಗೆ ಹಣದ ವ್ಯವಸ್ಥೆಯನ್ನೂ ಮಾಡಿದೆ ಎಂದವರು ಹೇಳಿದರು.
ಮಂಗಳೂರು ನಗರದಲ್ಲಿ ಕಾಂಕ್ರಿಟೀಕರಣ ಆಗಿದ್ದು ಈ ಹಿಂದೆ ಯಡಿಯೂರಪ್ಪ ನೇತೃತ್ವದ ಸರಕಾರದ ಅನುದಾನದಿಂದ. ನಗರ ಸುಂದರ ಆಗಿದ್ದರೆ ಅದಕ್ಕೆ ಯಡಿಯೂರಪ್ಪ ಕಾರಣ. ಅವರ ಅವಧಿಯಲ್ಲಿ ಅತಿ ಹೆಚ್ಚು ಅನುದಾನ ನಗರಕ್ಕೆ ದೊರಕಿದೆ. ಕಮಿಷನರೇಟ್ ಕಚೇರಿ, ಮಿನಿ ವಿಧಾನಸೌಧ, ಲೇಡಿಗೋಶನ್ ಆಸ್ಪತ್ರೆ ಮೇಲ್ದರ್ಜೆಗೆ ಮೊದಲಾದ ಕಾಮಗಾರಿಗಳು ಆ ಅವಧಿಯಲ್ಲಿ ನಡೆದಿರುವಂತದ್ದು. ಪ್ರಧಾನಿ ನರೇಂದ್ರ ಮೋದಿ ಹಾಗೂ ಈಗಿನ ಉಪರಾಷ್ಟ್ರಪತಿಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗ ಸ್ಮಾರ್ಟ್ ಸಿಟಿ ಹಾಗೂ ಅಮೃತ್ ಯೋಜನೆಯನ್ನು ನಗರಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಇದರಿಂದ ರಸ್ತೆಗಳ ಅಗಲೀಕರಣ, ಟವರ್ ಕ್ಲಾಕ್ ಎದ್ದು ನಿಂತಿದೆ ಎಂದು ಸಂಸದ ನಳಿನ್ ತಿಳಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಯೋಗೀಶ್ ಭಟ್, ನಾಯಕರಾದ ಜಿತೇಂದ್ರ ಕೊಟ್ಟಾರಿ, ಉದಯ ಕುಮಾರ್ ಶೆಟ್ಟಿ, ರವಿಶಂಕರ್ ಮಿಜಾರು, ಕಿಶೋರ್ ರೈ, ಭಾಸ್ಕರ ಚಂದ್ರ ಶೆಟ್ಟಿ, ಸಂಜಯ್ ಪ್ರಭು, ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…