ಬೆಂಗಳೂರು: ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಕಲ್ಯಾಣ ರಾಜ್ಯವನ್ನು ಕಟ್ಟುವುದು ನಮ್ಮ ಗುರಿ. ಕೋವಿಡ್ ಪಿಡುಗಿನ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ನಾವು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
74ನೇ ಸ್ವಾತಂತ್ರ್ಯ ದಿನ ಸಂದರ್ಭದಲ್ಲಿ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣಗೈದು ಜನತೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತ ಯೋಜನೆ ಭರವಸೆಯ ಹೊಂಗಿರಣವಾಗಿದೆ. ಪ್ರಧಾನಿ ಮೋದಿಯವರ ಆಶಯದಂತೆ ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಲು ಕರ್ನಾಟಕವು ದಿಟ್ಟ ಹೆಜ್ಜೆಯನ್ನಿಡುತ್ತಿದೆ ಎಂದರು.
ಕೋವಿಡ್ ಆರೋಗ್ಯ ಕ್ಷೇತ್ರ ಅಷ್ಟೇ ಅಲ್ಲ ಎಲ್ಲಾ ಕ್ಷೇತ್ರಗಳನ್ನು ಕಾಡಿದೆ. ಲಾಕ್ ಡೌನ್ ಕಾಲದಲ್ಲಿ ಮಂದಗತಿಗೆ ತೆರಳಿದ್ದ ನಮ್ಮ ಜೀವನ ಇಂದು ಚೇತರಿಸಿಕೊಳ್ಳುತ್ತಿದೆ. ನಾನು ಸಹ ಕೋವಿಡ್ ಸೋಂಕಿನಿಂದ ಬಾಧಿತನಾಗಿ, ಇದೀಗ ವೈದ್ಯಕೀಯ ಶುಶ್ರೋಷೆಯಿಂದ ಗುಣಮುಖನಾಗಿದ್ದೇನೆ. ನನ್ನ ಜನರು ಈ ಸೋಂಕಿನ ಬಗ್ಗೆ ಆತಂಕ ಅಥವಾ ಭಯಭೀತರಾಗುವ ಅಗತ್ಯವಿಲ್ಲ. ಜಾಗರೂಕತೆಯಿಂದ ಜೀವನ ನಡೆಸಬೇಕು ಎಂಬ ಸಂದೇಶವನ್ನು ಸಿಎಂ ನೀಡಿದ್ದಾರೆ.
ಪಿಪಿಇ ಕಿಟ್ ಉತ್ಪಾದನೆಯಿಂದ ಹಿಡಿದು ಸ್ಥಳೀಯ ಉದ್ಯಮಗಳಿಗೆ ಉತ್ತೇಜನ ನೀಡುವುದು, ಸೌರ ವಿದ್ಯುತ್, ಆಟೋ ಮೊಬೈಲ್ ವಿವಿಧ ವಲಯಗಳಲ್ಲಿ ಸ್ವಾಲಂಬನೆಯ ಗುರಿ ಸಾಧಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಿಎಂ ಬಿಎಸ್ ವೈ ಹೇಳಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…