ನವದೆಹಲಿ: ದೇಶಕ್ಕೆ ಕ್ರಾಂತಿಯ ಬದಲು ವಿಕಾಸದ ಅಗತ್ಯವಿದೆ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ದೇಶದ ಇತಿಹಾಸವನ್ನು ಉಳಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವರ್ಚುವಲ್ ಕಾನ್ಫರೆನ್ಸಿಂಗ್ ಮೂಲಕ ಅಖಿಲ ಭಾರತ ಮೇಯರ್ಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ವಿಕಾಸವನ್ನು ನಂಬಬೇಕು. ಭಾರತಕ್ಕೆ ಕ್ರಾಂತಿಯ ಅಗತ್ಯವಿಲ್ಲ, ಆದರೆ ವಿಕಾಸದ ಅಗತ್ಯವಿದೆ. ನಾವು ನಮ್ಮಲ್ಲಿರುವ ಎಲ್ಲವನ್ನು ರಕ್ಷಿಸಬೇಕು ಮತ್ತು ತಾಂತ್ರಿಕ ಉನ್ನತೀಕರಣದತ್ತ ಸಾಗಬೇಕು ಎಂದಿದ್ದಾರೆ.
ಭಾರತದ ಇತಿಹಾಸ ಮತ್ತು ಸಾಂಪ್ರದಾಯವು ಅಭಿವೃದ್ಧಿಯ ಜೊತೆಯಲ್ಲಿ ಸಾಗಬೇಕು. ನಮ್ಮ ದೇಶದ ಬಹುತೇಕ ನಗರಗಳು ಸಾಂಪ್ರದಾಯಿಕ ನಗರಗಳಾಗಿದ್ದು, ಸಂಪ್ರದಾಯಿಕ ರೀತಿಯಲ್ಲಿ ಅಭಿವೃದ್ಧಿ ಹೊಂದಿದ್ದು, ಆಧುನೀಕರಣದ ಈ ಯುಗದಲ್ಲಿ ಈ ನಗರಗಳ ಪ್ರಾಚೀನತೆಯೂ ಅಷ್ಟೇ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ವಾರಣಾಸಿ ಮಾರ್ಗಸೂಚಿಗಳು ನಮಗೆ ಹೇಗೆ ದೇಶವನ್ನು ಅಭಿವೃದ್ಧಿಗೊಳಿಸಬಹುದು ಎಂಬುವುದಕ್ಕೆ ಸಾಕಷ್ಟು ಐಡಿಯಾ ನೀಡುತ್ತದೆ ಎಂದು ಉದಾಹರಣೆ ನೀಡಿದ ಅವರು, ಇಲ್ಲಿನ ನದಿಗಳ ಸ್ವಚ್ಛತೆಯ ಮಹತ್ವವದ ಬಗ್ಗೆ ಕೂಡ ತಿಳಿಸಿದರು.
ಪ್ರಪಂಚದಾದ್ಯಂತ ಪ್ರವಾಸಿಗರು ಗಂಗಾ ಘಾಟ್ಗೆ ಆಗಮಿಸುತ್ತಾರೆ. ಕಾಶಿಯ ಆರ್ಥಿಕತೆಯನ್ನು ನಿಭಾಯಿಸುವಲ್ಲಿ ಗಂಗಾ ಮಾತೆಯ ಮಹತ್ವದ ಕೊಡುಗೆ ಹೊಂದಿದ್ದೇವೆ. ನಾವೆಲ್ಲರೂ ನಮ್ಮ ನಗರಗಳಲ್ಲಿನ ನದಿಯ ಬಗ್ಗೆ ಸೂಕ್ಷ್ಮವಾದ ವಿಧಾನವನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.
ಪ್ರತಿ ವರ್ಷ ನಮ್ಮ ನಗರಗಳಲ್ಲಿ ಏಳು ದಿನಗಳ ಕಾಲ ನದಿಯ ಹಬ್ಬವನ್ನು ಆಚರಿಸಬೇಕು. ಈ ಹಬ್ಬದಂದು ಇಡೀ ನಗರದ ಜನರೆಲ್ಲಾ ಸೇರಿ ನದಿಯನ್ನು ಸ್ವಚ್ಛಗೊಳಿಸಬೇಕು ಮತ್ತು ಅದರ ವಿಶೇಷತೆಯ ಬಗ್ಗೆ ಗಮನ ಹರಿಸಬೇಕು ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…