Featured

ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ದೇಶದ ಇತಿಹಾಸವನ್ನು ಉಳಿಸಬೇಕಾಗಿದೆ  : ಪ್ರಧಾನಿ – VIshwanews24

ಭಾರತಕ್ಕೆ ಕ್ರಾಂತಿಯ ಅಗತ್ಯವಿಲ್ಲ, ಆದರೆ ವಿಕಾಸದ ಅಗತ್ಯವಿದೆ..

ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ದೇಶದ ಇತಿಹಾಸವನ್ನು ಉಳಿಸಬೇಕಾಗಿದೆ ..

ನವದೆಹಲಿ: ದೇಶಕ್ಕೆ ಕ್ರಾಂತಿಯ ಬದಲು ವಿಕಾಸದ ಅಗತ್ಯವಿದೆ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ದೇಶದ ಇತಿಹಾಸವನ್ನು ಉಳಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವರ್ಚುವಲ್ ಕಾನ್ಫರೆನ್ಸಿಂಗ್ ಮೂಲಕ ಅಖಿಲ ಭಾರತ ಮೇಯರ್‌ಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ವಿಕಾಸವನ್ನು ನಂಬಬೇಕು. ಭಾರತಕ್ಕೆ ಕ್ರಾಂತಿಯ ಅಗತ್ಯವಿಲ್ಲ, ಆದರೆ ವಿಕಾಸದ ಅಗತ್ಯವಿದೆ. ನಾವು ನಮ್ಮಲ್ಲಿರುವ ಎಲ್ಲವನ್ನು ರಕ್ಷಿಸಬೇಕು ಮತ್ತು ತಾಂತ್ರಿಕ ಉನ್ನತೀಕರಣದತ್ತ ಸಾಗಬೇಕು ಎಂದಿದ್ದಾರೆ.

ಭಾರತದ ಇತಿಹಾಸ ಮತ್ತು ಸಾಂಪ್ರದಾಯವು ಅಭಿವೃದ್ಧಿಯ ಜೊತೆಯಲ್ಲಿ ಸಾಗಬೇಕು. ನಮ್ಮ ದೇಶದ ಬಹುತೇಕ ನಗರಗಳು ಸಾಂಪ್ರದಾಯಿಕ ನಗರಗಳಾಗಿದ್ದು, ಸಂಪ್ರದಾಯಿಕ ರೀತಿಯಲ್ಲಿ ಅಭಿವೃದ್ಧಿ ಹೊಂದಿದ್ದು, ಆಧುನೀಕರಣದ ಈ ಯುಗದಲ್ಲಿ ಈ ನಗರಗಳ ಪ್ರಾಚೀನತೆಯೂ ಅಷ್ಟೇ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ವಾರಣಾಸಿ ಮಾರ್ಗಸೂಚಿಗಳು ನಮಗೆ ಹೇಗೆ ದೇಶವನ್ನು ಅಭಿವೃದ್ಧಿಗೊಳಿಸಬಹುದು ಎಂಬುವುದಕ್ಕೆ ಸಾಕಷ್ಟು ಐಡಿಯಾ ನೀಡುತ್ತದೆ ಎಂದು ಉದಾಹರಣೆ ನೀಡಿದ ಅವರು, ಇಲ್ಲಿನ ನದಿಗಳ ಸ್ವಚ್ಛತೆಯ ಮಹತ್ವವದ ಬಗ್ಗೆ ಕೂಡ ತಿಳಿಸಿದರು.

ಪ್ರಪಂಚದಾದ್ಯಂತ ಪ್ರವಾಸಿಗರು ಗಂಗಾ ಘಾಟ್‍ಗೆ ಆಗಮಿಸುತ್ತಾರೆ. ಕಾಶಿಯ ಆರ್ಥಿಕತೆಯನ್ನು ನಿಭಾಯಿಸುವಲ್ಲಿ ಗಂಗಾ ಮಾತೆಯ ಮಹತ್ವದ ಕೊಡುಗೆ ಹೊಂದಿದ್ದೇವೆ. ನಾವೆಲ್ಲರೂ ನಮ್ಮ ನಗರಗಳಲ್ಲಿನ ನದಿಯ ಬಗ್ಗೆ ಸೂಕ್ಷ್ಮವಾದ ವಿಧಾನವನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಪ್ರತಿ ವರ್ಷ ನಮ್ಮ ನಗರಗಳಲ್ಲಿ ಏಳು ದಿನಗಳ ಕಾಲ ನದಿಯ ಹಬ್ಬವನ್ನು ಆಚರಿಸಬೇಕು. ಈ ಹಬ್ಬದಂದು ಇಡೀ ನಗರದ ಜನರೆಲ್ಲಾ ಸೇರಿ ನದಿಯನ್ನು ಸ್ವಚ್ಛಗೊಳಿಸಬೇಕು ಮತ್ತು ಅದರ ವಿಶೇಷತೆಯ ಬಗ್ಗೆ ಗಮನ ಹರಿಸಬೇಕು ಎಂದರು.

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

28 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

42 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago