ಕಾಪು : ಬಿಜೆಪಿ ಶಿಸ್ತಿನ ಪಕ್ಷ. ಪಕ್ಷದಲ್ಲಿ ಯಾವುದೇ ಗೊಂದಲಗಳಿದ್ದರೂ ಒಂದೇ ಮನೆಯ ಕುಟುಂಬದಂತೆ ಎಲ್ಲರೂ ಹಿರಿಯರು ಯಾವುದೇ ಗೊಂದಲಗಳಿದ್ದರೂ ಪರಿಹರಿಸಿಸುತ್ತಾರೆ. ಇನ್ನು ಮುಂದಿನ ದಿನಗಳಲ್ಲಿ ಪಕ್ಷದ ಅಭ್ಯರ್ಥಿಯಾಗಿರುವ ಲಾಲಾಜಿ ಮೆಂಡನ್ ಅವರ ಗೆಲುವಿಗೆ ಎಲ್ಲರೂ ಹೋರಾಟ ನಡೆಸುತ್ತೇವೆ. ಸಾಮಾಜಿಕ ನ್ಯಾಯದಂತೆ ಪಕ್ಷದಲ್ಲಿ ಓರ್ವ ಮೊಗವೀರ ಸಮುದಾಯಕ್ಕೆ ಟಿಕೆಟ್ ನೀಡುವ ನಿಟ್ಟಿನಲ್ಲಿ ಲಾಲಾಜಿ ಮೆಂಡನ್ ಅವರಿಗೆ ನೀಡಲಾಗಿದೆ ಎಂದ ಕಾಪು ಬಿಜೆಪಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಹೇಳಿದರು
ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸೂತ್ರದಂತೆ 10 ಮನೆಗಳಿಗೆ ಒಬ್ಬ ಕಾರ್ಯಕರ್ತನನ್ನು ಆಯ್ಕೆ ಮಾಡಲಾಗುವುದು. ಈ ಸೂತ್ರವು ಈಶಾನ್ಯ ರಾಜ್ಯಗಳಲ್ಲಿ ಯಶಸ್ವಿಯಾಗಿದ್ದು, ಇಲ್ಲೂ ಅದೇ ಸೂತ್ರವನ್ನು ಅಳವಡಿಸಿಕೊಳ್ಳಲಾಗುವುದು. ಈ ಮೂಲಕ ಚುನಾವಣೆಗೆ ರಣತಂತ್ರ ರೂಪಿಸಲಾಗಿದೆ. ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ ಎಂದರು.
ಒಂದು ಮನೆಯಲ್ಲಿದ್ದಾಗ ರಾಜಕೀಯ ಭವಿಷ್ಯದ ಬಗ್ಗೆ ಚಿಂತನೆ ಮಾಡಿದ್ದಾರೆ. ಪಕ್ಷ ಬಿಡುವುದಿಲ್ಲ. ಬೆಂಬಲಿಗರ ಮನವೊಲಿಸಲಾಗಿದೆ ಎಂದೂ ಗುರ್ಮೆ ಹೇಳಿದ್ದಾರೆ.
ಪಕ್ಷದ ಅಭ್ಯರ್ಥಿ ಲಾಲಾಜಿ ಮೆಂಡನ್ ಮಾತನಾಡಿ, ಪಕ್ಷದ ಮುಖಂಡರು ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲಗಳೂ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದ ಬಗ್ಗೆ ಜನೆತೆಗೆ ಮುಟ್ಟಿಸುವ ನಿಟ್ಟಿನಲ್ಲಿ ಈಗಾಗಲೇ ಪೂರ್ವ ತಯಾರಿ ಸಭೆಗಳು ನಡೆದಿವೆ. ಜಿಲ್ಲೆಗೆ ನರೇಂದ್ರ ಮೋದಿ ಸಹಿತ ವಿವಿಧ ರಾಷ್ಟ್ರೀಯ ಚುನಾವಣಾ ಪ್ರಚಾರಕರು ಆಗಮಿಸಲಿದ್ದಾರೆ. ಕಾಪುವಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ ಎಂದ ಅವರು ಈ ಭಾರಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದರು.
ಕಾಪು ಕ್ಷೇತ್ರದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಟಪಾಡಿ ಶಂಕರ ಪೂಜಾರಿ, ಜಿತೇಂದ್ರ ಶೆಟ್ಟಿ ಉದ್ಯಾವರ, ಶಿಲ್ಪಾ ಸುವರ್ಣ, ಗಂಗಾಧರ ಸುವರ್ಣ, ಕೇಸರಿ ಯು., ಚಂದ್ರ ಮಲ್ಲಾರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…