Featured

ಅಮರನಾಥ ಯಾತ್ರೆ ಪುನರಾಂಭಿಸಿದ ಬಂಟ್ವಾಳದ ಯಾತ್ರಿಕರ ತಂಡ – VIshwanews24

ಅಮರನಾಥ ಯಾತ್ರೆ ಪುನರಾಂಭಿಸಿದ ಬಂಟ್ವಾಳದ ಯಾತ್ರಿಕರ ತಂಡ

ಬಂಟ್ವಾಳ: ಅಮರನಾಥದ ಪವಿತ್ರ ಗುಹಾಲಯದ ಸಮೀಪದಲ್ಲಿ ಶುಕ್ರವಾರ ಉಂಟಾದ ಮೇಘ ಸ್ಪೋಟದಿಂದ ದಿಢೀರ್ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಸೋಮವಾರ ಬೆಳಿಗ್ಗೆ ಪುನರಾರಂಭಿಸಲಾಗಿದ್ದು, ದಿನದ ಮಟ್ಟಿಗೆ ಮಿಲಿಟ್ರಿ ಬೇಸ್ ನಲ್ಲಿ ವಿಶ್ರಾಂತಿ ಪಡೆದಿದ್ದ ಬಂಟ್ವಾಳದ ಯಾತ್ರಿಕರೂ ದರ್ಶನದ ತವಕದಲ್ಲಿದ್ದಾರೆ.

ಅಮರನಾಥ ನಡೆದ ಮೇಘಸ್ಪೋಟದಿಂದ ಹಲವಾರು ಜೀವಹಾನಿ ಆಗಿತ್ತು, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಸಹಿತ ಎಲ್ಲಾ ಕನ್ನಡಿಗರೂ ಸುರಕ್ಷಿತರಾಗಿದ್ದಾರೆ ಎಂದೂ ಸರ್ಕಾರ ಸ್ಪಷ್ಟ ಪಡಿಸಿದ್ದರು. ನಡೆದಿದ್ದ ದುರ್ಘಟನೆ ಹಿನ್ನೆಲೆ ವಿವಿಧ ರಾಜ್ಯಗಳ ಹಲವರು ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿದ್ದರು. ಆದರೆ ಅಮರನಾಥ ದ ವರೆಗೆ ತಲುಪಿದ್ದ ಬಂಟ್ವಾಳದ ತಂಡ‌ ಮಿಲಿಟ್ರಿ‌ ಬೇಸ್ ನಲ್ಲಿ ಇತರ ಸಹಸ್ರ ಸಹಸ್ರ ಯಾತ್ರಿಗಳ ಜೊತೆ ವಿಶ್ರಾಂತಿ ಪಡೆದಿದ್ದರು.ಭಾನುವಾರ ಸ್ಥಳಕ್ಕೆ ಭೇಟಿ‌ ನೀಡಿದ್ದ ಅಲ್ಲಿನ ರಾಜ್ಯಪಾಲರು ಸೋಮವಾರ ಬೆಳಿಗ್ಗೆ ದರ್ಶನಕ್ಕೆ ಅವಕಾಶ ಒದಗಿಸುವುದಾಗಿ ತಿಳಿಸಿದ್ದು, ಅದರಂತೆ ಇಂದು ಬೆಳಗ್ಗೆಯಿಂದ ಅಮರನಾಥ ದರ್ಶನಕ್ಕೆ ತೆರಳುತ್ತಿರುವುದಾಗಿ‌ ಯಾತ್ರಿ ಸುರೇಶ್ ಕೋಟ್ಯಾನ್ ಮಾಹಿತಿ‌ ನೀಡಿದ್ದಾರೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

21 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

21 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

21 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

21 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

23 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

3 days ago