ಬಂಟ್ವಾಳ: ಅಮರನಾಥದ ಪವಿತ್ರ ಗುಹಾಲಯದ ಸಮೀಪದಲ್ಲಿ ಶುಕ್ರವಾರ ಉಂಟಾದ ಮೇಘ ಸ್ಪೋಟದಿಂದ ದಿಢೀರ್ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಸೋಮವಾರ ಬೆಳಿಗ್ಗೆ ಪುನರಾರಂಭಿಸಲಾಗಿದ್ದು, ದಿನದ ಮಟ್ಟಿಗೆ ಮಿಲಿಟ್ರಿ ಬೇಸ್ ನಲ್ಲಿ ವಿಶ್ರಾಂತಿ ಪಡೆದಿದ್ದ ಬಂಟ್ವಾಳದ ಯಾತ್ರಿಕರೂ ದರ್ಶನದ ತವಕದಲ್ಲಿದ್ದಾರೆ.
ಅಮರನಾಥ ನಡೆದ ಮೇಘಸ್ಪೋಟದಿಂದ ಹಲವಾರು ಜೀವಹಾನಿ ಆಗಿತ್ತು, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಸಹಿತ ಎಲ್ಲಾ ಕನ್ನಡಿಗರೂ ಸುರಕ್ಷಿತರಾಗಿದ್ದಾರೆ ಎಂದೂ ಸರ್ಕಾರ ಸ್ಪಷ್ಟ ಪಡಿಸಿದ್ದರು. ನಡೆದಿದ್ದ ದುರ್ಘಟನೆ ಹಿನ್ನೆಲೆ ವಿವಿಧ ರಾಜ್ಯಗಳ ಹಲವರು ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿದ್ದರು. ಆದರೆ ಅಮರನಾಥ ದ ವರೆಗೆ ತಲುಪಿದ್ದ ಬಂಟ್ವಾಳದ ತಂಡ ಮಿಲಿಟ್ರಿ ಬೇಸ್ ನಲ್ಲಿ ಇತರ ಸಹಸ್ರ ಸಹಸ್ರ ಯಾತ್ರಿಗಳ ಜೊತೆ ವಿಶ್ರಾಂತಿ ಪಡೆದಿದ್ದರು.ಭಾನುವಾರ ಸ್ಥಳಕ್ಕೆ ಭೇಟಿ ನೀಡಿದ್ದ ಅಲ್ಲಿನ ರಾಜ್ಯಪಾಲರು ಸೋಮವಾರ ಬೆಳಿಗ್ಗೆ ದರ್ಶನಕ್ಕೆ ಅವಕಾಶ ಒದಗಿಸುವುದಾಗಿ ತಿಳಿಸಿದ್ದು, ಅದರಂತೆ ಇಂದು ಬೆಳಗ್ಗೆಯಿಂದ ಅಮರನಾಥ ದರ್ಶನಕ್ಕೆ ತೆರಳುತ್ತಿರುವುದಾಗಿ ಯಾತ್ರಿ ಸುರೇಶ್ ಕೋಟ್ಯಾನ್ ಮಾಹಿತಿ ನೀಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…