ಬಂಟ್ವಾಳ: ಅಮರನಾಥದ ಪವಿತ್ರ ಗುಹಾಲಯದ ಸಮೀಪದಲ್ಲಿ ಶುಕ್ರವಾರ ಉಂಟಾದ ಮೇಘ ಸ್ಪೋಟದಿಂದ ದಿಢೀರ್ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಸೋಮವಾರ ಬೆಳಿಗ್ಗೆ ಪುನರಾರಂಭಿಸಲಾಗಿದ್ದು, ದಿನದ ಮಟ್ಟಿಗೆ ಮಿಲಿಟ್ರಿ ಬೇಸ್ ನಲ್ಲಿ ವಿಶ್ರಾಂತಿ ಪಡೆದಿದ್ದ ಬಂಟ್ವಾಳದ ಯಾತ್ರಿಕರೂ ದರ್ಶನದ ತವಕದಲ್ಲಿದ್ದಾರೆ.
ಅಮರನಾಥ ನಡೆದ ಮೇಘಸ್ಪೋಟದಿಂದ ಹಲವಾರು ಜೀವಹಾನಿ ಆಗಿತ್ತು, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಸಹಿತ ಎಲ್ಲಾ ಕನ್ನಡಿಗರೂ ಸುರಕ್ಷಿತರಾಗಿದ್ದಾರೆ ಎಂದೂ ಸರ್ಕಾರ ಸ್ಪಷ್ಟ ಪಡಿಸಿದ್ದರು. ನಡೆದಿದ್ದ ದುರ್ಘಟನೆ ಹಿನ್ನೆಲೆ ವಿವಿಧ ರಾಜ್ಯಗಳ ಹಲವರು ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿದ್ದರು. ಆದರೆ ಅಮರನಾಥ ದ ವರೆಗೆ ತಲುಪಿದ್ದ ಬಂಟ್ವಾಳದ ತಂಡ ಮಿಲಿಟ್ರಿ ಬೇಸ್ ನಲ್ಲಿ ಇತರ ಸಹಸ್ರ ಸಹಸ್ರ ಯಾತ್ರಿಗಳ ಜೊತೆ ವಿಶ್ರಾಂತಿ ಪಡೆದಿದ್ದರು.ಭಾನುವಾರ ಸ್ಥಳಕ್ಕೆ ಭೇಟಿ ನೀಡಿದ್ದ ಅಲ್ಲಿನ ರಾಜ್ಯಪಾಲರು ಸೋಮವಾರ ಬೆಳಿಗ್ಗೆ ದರ್ಶನಕ್ಕೆ ಅವಕಾಶ ಒದಗಿಸುವುದಾಗಿ ತಿಳಿಸಿದ್ದು, ಅದರಂತೆ ಇಂದು ಬೆಳಗ್ಗೆಯಿಂದ ಅಮರನಾಥ ದರ್ಶನಕ್ಕೆ ತೆರಳುತ್ತಿರುವುದಾಗಿ ಯಾತ್ರಿ ಸುರೇಶ್ ಕೋಟ್ಯಾನ್ ಮಾಹಿತಿ ನೀಡಿದ್ದಾರೆ.
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಉಡುಪಿ: ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…