ಬೆಂಗಳೂರು: ಸ್ವಾತಂತ್ರೋತ್ಸವದ ವೇಳೆ ಕೊಡಮಾಡುವ ‘ಸಿಎಂ ಪದಕ’ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಾದ ಪೊಲೀಸ್ ಪೇದೆಯ ಹೆಸರು ಪ್ರಕಟವಾಗಿರುವುದು ಗೃಹ ಇಲಾಖೆಯ ಅಧಃಪತನಕ್ಕೆ ನಿದರ್ಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಪೇದೆ ಅಮಾನತು ಆದೇಶದ ಪ್ರತಿಯನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡು ಪೋಸ್ಟ್ ಹಾಕಿರುವ ವಿಜಯೇಂದ್ರ, ಕೆಲ ನಾಮಧೇಯಗಳನ್ನು ಕಂಡರೆ ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿಕೊಳ್ಳುತ್ತದೆ. ಅಪರಾಧಿಯಾಗಿದ್ದರೂ ಸರಿ, ಕೊನೆಗೆ ಭಯೋತ್ಪಾದಕರಾದರೂ ಸರಿ, ಅವರ ಬಗೆಗಿನ ಕಾಳಜಿಯಲ್ಲಿ ರಾಜೀಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎನ್ನುವುದನ್ನು ಸಾಬೀತುಪಡಿಸುವ ರೀತಿಯಲ್ಲಿ ಸ್ವಾತಂತ್ರೋತ್ಸವದ ವೇಳೆ ಕೊಡಮಾಡುವ ಸಿಎಂ ಪದಕ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಿಗೊಳಗಾದ ಪೊಲೀಸ್ ಪೇದೆಯೊಬ್ಬರ ಹೆಸರು ಪ್ರಕಟವಾಗಿದೆ ಎಂದು ಕಿಡಿಕಾರಿದ್ದಾರೆ.
ಸಲೀಂ ಪಾಷಾ ಎಂಬ ಪೇದೆ ಪದಕ ಪಟ್ಟಿಗೆ ಸೇರ್ಪಡೆಗೊಂಡ ಅದೃಷ್ಟವಂತ. ಅಪರಾಧಿಗಳೊಂದಿಗೆ ಕೈಜೋಡಿಸಿ ಕಳ್ಳತನಗಳಿಗೆ ನೆರವಾಗುತ್ತಿದ್ದ ಹಾಗೂ ಇಲಾಖೆಯ ದಾಖಲೆಗಳನ್ನು ಸೋರಿಕೆ ಮಾಡುವ ವಿದ್ರೋಹ ಕೃತ್ಯದ ಆರೋಪದ ಮೇಲೆ ಅಮಾನತಾಗಿರುವುದೇ ಈತನ ಅರ್ಹತೆಯಾಗಿರುವಂತಿದೆ. ಇಂತಹ ಪೇದೆಯ ಹೆಸರು ಪದಕ ಪಟ್ಟಿಯಲ್ಲಿರುವುದು ಗೃಹ ಇಲಾಖೆ ಅಧಃಪತನಕ್ಕೆ ನಿದರ್ಶನವಾಗಿದೆ ಎಂದು ಟೀಕಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…