ಅಮಾಯಕರನ್ನು ಬಂಧಿಸಿದ ಪೊಲೀಸರ ವಿರುದ್ಧ SDPI ಕಾನೂನಾತ್ಮಕ ಹೋರಾಟ ನಡೆಸಲಿದೆ : ಅನ್ವರ್‌ ಸಾದಾತ್ – Vishwanews24

Featured, ದಕ್ಷಿಣ ಕನ್ನಡ

ಸಂಘಪರಿವಾರವನ್ನು ತೃಪ್ತಿ ಪಡಿಸಲು ಮಂಗಳೂರು ಪೊಲೀಸರಿಂದ ಎಸ್‌ಡಿಪಿಐ ಕಾರ್ಯಕರ್ತರ ಬಂಧನ..

SDPI ಬೆಳವಣಿಗೆ ಸಹಿಸದೇ ಸಂಘ ಪರಿವಾರದ ಅಣತಿಯಂತೆ ಪೊಲೀಸ್ ಇಲಾಖೆ ವರ್ತಿಸುತ್ತಿದೆ..

ಮಂಗಳೂರು: SDPI ಸಮಾವೇಶಕ್ಕೆ ತೆರಳುವ ವೇಳೆ ಪೊಲೀಸರನ್ನು ನಿಂದಿಸಲಾಗಿದೆ ಎಂದು ಆರೋಪಿಸಿ ಸುಮಾರು 10ಕ್ಕೂ ಹೆಚ್ಚು SDPI ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ SDPI, ಘಟನೆಯಲ್ಲಿ ಹಲವು ಅಮಾಯಕರನ್ನು ಬಂಧಿಸಲಾಗುತ್ತಿದೆ ಎಂದು ಆರೋಪಿಸಿದೆ.ಮಾಧ್ಯಮಗಳೊಂದಿಗೆ ಮಾತನಾಡಿದ SDPI ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರ್, ಪೊಲೀಸ್ ನಿಂದನೆ ಘೋಷಣೆ ಖಂಡನೀಯವಾಗಿದ್ದು, ನಾಗರಿಕ ಸಮಾಜ ಒಪ್ಪುವುದಿಲ್ಲ.

ಪೊಲೀಸರ ಬಗ್ಗೆ SDPI ಗೌರವ ಹೊಂದಿದ್ದು, ವೀಡಿಯೋ ವೈರಲ್ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳನ್ನು SDPI ನಾಯಕರು ಸಂಪರ್ಕಿಸಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು ಎಂದು ಸ್ಪಷ್ಟನೆ ನೀಡಿದರು.ಕಳೆದ ತಿಂಗಳು ಮಂಗಳೂರಿನಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಮೋದ್ ಮುತಾಲಿಕ್ ಗೆ ಪೊಲೀಸ್ ಆಯುಕ್ತರು ರಾಜಾತಿಥ್ಯ ನೀಡಿದ್ದರು. ಇದನ್ನು SDPI ನಾಯಕರು ಖಂಡಿಸಿ ಪೋಸ್ಟ್ ಮಾಡಿದ್ದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಪಾಸಿಟೀವ್ – Vishwnaews24

ಆ ಬಳಿಕ SDPI ಅನ್ನು ಹತ್ತಿಕ್ಕಲು ಪೊಲೀಸ್ ಇಲಾಖೆ ಮುಂದಾಗಿದೆ. ಇದು ಪೊಲೀಸ್ ಆಯುಕ್ತರಿಗೆ ಶೋಭೆ ತರುವುದಿಲ್ಲ ಎಂದು ಸಾದಾತ್ ಹೇಳಿದರು.ಘಟನೆಯಲ್ಲಿ ಹಲವು ಅಮಾಯಕರನ್ನು ಬಂಧಿಸಲಾಗುತ್ತಿದ್ದು, ಕೆಲವೇ ಜನರು ಮಾಡಿದ ತಪ್ಪಿಗೆ ಹಲವರನ್ನು ಬಂಧಿಸಲಾಗಿದೆ. ಸಮಾವೇಶದಲ್ಲಿ ಭಾಗವಹಿಸದವರನ್ನೂ ಬಂಧಿಸಲಾಗಿದೆ. ಇದರಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರೂ ಸೇರಿದ್ದಾರೆ. ಬೆಂಗಳೂರು, ಮೈಸೂರಿಗೆ ತೆರಳಿ ಕೆಲವರನ್ನು ಬಂಧಿಸಲಾಗಿದ್ದು, ಈ ವೇಳೆ ಜೊತೆಗಿದ್ದವರನ್ನು ಬಂಧಿಸಲಾಗಿದೆ. ಆಶ್ರಯ ನೀಡಿದ ಆರೋಪದಲ್ಲಿ ರೂಂ ಮೇಟ್ ಗಳನ್ನೂ ಬಂಧಿಸಲಾಗಿದೆ ಎಂದು ಅವರು ಆರೋಪಿಸಿದರು.

ಸಮಾವೇಶದ ಮುನ್ನವೇ ಘೋಷಣೆ ಕೂಗಿರುವ ವೀಡಿಯೋ ವೈರಲ್ ಆಗಿತ್ತು. SDPI ಬೆಳವಣಿಗೆ ಸಹಿಸದೇ ಸಂಘ ಪರಿವಾರದ ಅಣತಿಯಂತೆ ಪೊಲೀಸ್ ಇಲಾಖೆ ವರ್ತಿಸುತ್ತಿದೆ. ಜಗದೀಶ್ ಕಾರಂತ ಈ ಹಿಂದೆ ಹಲವು ಬಾರಿ ಪೊಲೀಸರಿಗೆ, ಡಿಸಿ ಗೆ ಬಹಿರಂಗ ಧಮ್ಕಿ ಹಾಕಿದ್ದರು. ಆದರೆ ಕಾರಂತ ಬಂಧಿಸಲು ಇಲ್ಲಿನ ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ಅನ್ವರ್ ಸಾದಾತ್ ಹೇಳಿದರು.

ಅಮಾಯಕರನ್ನು ಬಂಧಿಸಿದ ಪೊಲೀಸರ ವಿರುದ್ಧ SDPI ಕಾನೂನಾತ್ಮಕ ಹೋರಾಟ ನಡೆಸಲಿದೆ. ಅಲ್ಲದೆ, ಮಾನವ ಹಕ್ಕು ಆಯೋಗಕ್ಕೂ SDPI ದೂರು ನೀಡಲಿದೆ. ಘೋಷಣೆ ಕೂಗಿದವರನ್ನು ಆರೋಪಿಗಳೆಂದು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಘಟನೆ ಸಂಬಂಧಪಡದವರನ್ನು ಬಂಧಿಸಲಾಗಿದೆ. ಸಂಘ ಪರಿವಾರವರನ್ನು ತೃಪ್ತಿ ಪಡಿಸಲು ಈ ರೀತಿ ಮಾಡಲಾಗಿದೆ. ಇದರ ಹಿಂದೆ ಇಲ್ಲಿನ ಶಾಸಕ, ಸಂಸದರ ಕೈವಾಡವೂ ಇದೆ ಅವರು ಎಂದು ಆರೋಪಿಸಿದರು

ಪ್ರತಿಯೊಬ್ಬ ಭಾರತೀಯನಿಗೂ ಆರೆಸ್ಸೆಸ್ ಕಂಡರೆ ಭಯ, ಭಯ ಹುಟ್ಟಿಸುವವರನ್ನು ಭಯೋತ್ಪಾದಕರು ಎನ್ನಲಾಗುತ್ತಿದೆ : ಸಿದ್ದರಾಮಯ್ಯ – Vishwnaews24

Leave a Reply