ಹೊಸದಿಲ್ಲಿ: ಫೋನ್ ಕರೆ ಮಾಡಿದಾಗಲೆಲ್ಲಾ ಕೇಳಿಬರುತ್ತಿದ್ದ ʼಸೈಬರ್ ವಂಚನೆಗಳ ವಿರುದ್ಧ ಜಾಗರೂಕರಾಗಿರಿʼ ಎನ್ನುವ ರೆಕಾರ್ಡ್ ಮಾಡಲಾದ ಧ್ವನಿ ಇಂದಿನಿಂದ ಸ್ಥಗಿತಗೊಳ್ಳಲಿದೆ. ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಧ್ವನಿಯನ್ನು ಒಳಗೊಂಡ, ಸೈಬರ್ ಅಪರಾಧದ ಬಗ್ಗೆ ನಾಗರಿಕರಿಗೆ ಎಚ್ಚರಿಕೆ ನೀಡುವ ಪರಿಚಿತ ಕಾಲರ್ ಟ್ಯೂನ್ ಇನ್ನು ಮುಂದೆ ಕೇಳಿಬರುವುದಿಲ್ಲ.
ಸರ್ಕಾರದ ಭಾಗವಾಗಿದ್ದ ಈ ಜಾಗೃತ ಅಭಿಯಾನವು ಗುರುವಾರ (ಜೂನ್ 26) ಅಧಿಕೃತವಾಗಿ ಕೊನೆಗೊಂಡ ಕಾರಣ ಕಾಲರ್ ಟ್ಯೂನ್ ಅನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ವರದಿಯಾಗಿದೆ.
ಆನ್ಲೈನ್ ವಂಚನೆಗಳ ಹೆಚ್ಚುತ್ತಿರುವ ಬೆದರಿಕೆಯ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಉದ್ದೇಶದಿಂದ ಇದನ್ನು ಸರ್ಕಾರ ಅಳವಡಿಸಿತ್ತು. ಕೆಲವರು ತುರ್ತು ಸಂದರ್ಭಗಳಲ್ಲಿ, ಕಾಲರ್ ಟ್ಯೂನ್ ಕರೆಗಳನ್ನು ಸಂಪರ್ಕಿಸುವಲ್ಲಿ ಅನಗತ್ಯ ವಿಳಂಬವನ್ನು ಉಂಟುಮಾಡುತ್ತದೆ ಎಂದು ದೂರಿದ್ದರು. ಕೆಲವರು ಅಮಿತಾಬ್ ಬಚ್ಚನ್ ಅವರನ್ನು ಟೀಕಿಸಿ, ದೀರ್ಘ ಸಂದೇಶಕ್ಕಾಗಿ ಅವರನ್ನು ಟ್ರೋಲ್ ಮಾಡಿದ್ದರು.
ಸಾಮಾಜಿಕ ಮಾಧ್ಯಮದಲ್ಲಿ ಹಲವರು ಈ ಬಗ್ಗೆ ತಮ್ಮ ಬೇಸರ ವ್ಯಕ್ತಪಡಿಸಿದ್ದರು. ವರದಿಗಳ ಪ್ರಕಾರ, ಈಗ ಅಭಿಯಾನ ಮುಗಿದಿರುವುದರಿಂದ, ಭಾರತ ಸರ್ಕಾರವು ಕಾಲರ್ ಟ್ಯೂನ್ ಅನ್ನು ಸಹ ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…