ರಾಜ್ಯ ನ್ಯೂಸ್

ಅಮಿತ್ ಶಾ ಭೇಟಿ ಹಿಂದೆ ರಾಜಕೀಯ ಇಲ್ಲ: ಶಿವಯೋಗ ಮಂದಿರದ ಅಧ್ಯಕ್ಷ ಸಂಗನಬಸವ ಸ್ವಾಮೀಜಿ

ಶಿವಯೋಗ ಮಂದಿರ ಒಂದು ರಾಜಕೀಯೇತರ ಸಂಸ್ಥೆಯಾಗಿದೆ. ಇಲ್ಲಿಗೆ ಯಾರೂ ಬೇಕಾದರೂ ಭೇಟಿ ಮಾಡಬಹುದು. ಈ ಹಿಂದೆ ರಾಜಕೀಯ ಮುಖಂಡರಾದ ಸೋನಿಯಾ ಗಾಂಧಿ, ಎಲ್.ಕೆ. ಅಡ್ವಾಣಿ ಭೇಟಿ ನೀಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಯ ಹಿಂದೆ ಯಾವುದೇ ರಾಜಕೀಯ ಇಲ್ಲ’ ಎಂದು ಶಿವಯೋಗ ಮಂದಿರದ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಹೇಳಿದರು.

ಬಾಗಲಕೋಟೆ: ‘ಶಿವಯೋಗ ಮಂದಿರ ಒಂದು ರಾಜಕೀಯೇತರ ಸಂಸ್ಥೆಯಾಗಿದೆ. ಇಲ್ಲಿಗೆ ಯಾರೂ ಬೇಕಾದರೂ ಭೇಟಿ ಮಾಡಬಹುದು. ಈ ಹಿಂದೆ ರಾಜಕೀಯ ಮುಖಂಡರಾದ ಸೋನಿಯಾ ಗಾಂಧಿ, ಎಲ್.ಕೆ. ಅಡ್ವಾಣಿ ಭೇಟಿ ನೀಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಯ ಹಿಂದೆ ಯಾವುದೇ ರಾಜಕೀಯ ಇಲ್ಲ’ ಎಂದು ಶಿವಯೋಗ ಮಂದಿರದ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಹೇಳಿದರು.

ಮಂಗಳವಾರ ಶಿವಯೋಗ ಮಂದಿರಕ್ಕೆ ಅಮಿತ್ ಶಾ ಅವರು ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿ ಅವರು ಮಾತನಾಡಿದರು.

‘ರಾಜಕೀಯ ಲಾಭ ಪಡೆಯುವುದು ‘ಶಾ’ ಅವರ ಉದ್ದೇಶವೂ ಆಗಿರಬಹುದು. ಆದರೆ ಶಿವಯೋಗ ಮಂದಿರ ಸ್ವಾಮೀಜಿಗಳನ್ನ ತಯಾರಿಸುವ ಸಂಸ್ಥೆಯಾಗಿದೆ. ಇಲ್ಲಿ ಎಲ್ಲಾ ಪಕ್ಷಗಳಿಗೂ ಮುಕ್ತ ಅವಕಾಶ ಇದೆ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ಅವರೂ ಇಲ್ಲಿಗೆ ಬರಬಹುದು’ ಎಂದರು.

‘ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ‌ಮಾನ್ಯತೆ ನೀಡಬಾರದು ಎಂದು ಅಮಿತ್ ಶಾ ಅವರಿಗೆ ಮನವಿ ಮಾಡಲಿದ್ದೇವೆ’ ಎಂದು ತಿಳಿಸಿದರು.

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ನಿಂತವರೆಲ್ಲರೂ ಲಿಂಗಧಾರಣೆ ಮಾಡಿಲ್ಲ. ಲಿಂಗಧಾರಣೆ ಅಂದರೆ ಏನು ಎನ್ನುವುದು ಗೊತ್ತಿಲ್ಲದವರು ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆ ಕೇಳುತ್ತಿದ್ದಾರೆ ಎಂದರು.

ಲಿಂಗಧಾರಣೆ ಮಾಡದವರಿಂದ ಬಸವಣ್ಣನವರ ಉಪದೇಶ ಕೇಳಬೇಕಾಗಿಲ್ಲ ನಾವು ಶೋಷಣೆಯ ವಿರುದ್ಧ ಇದ್ದವರು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ನಿರ್ಧಾರ ತೆಗೆದುಕೊಂಡಿದ್ದು ತಪ್ಪು, ಚುನಾವಣೆಯ ಹೊಸ್ತಿಲಲ್ಲಿ ಧರ್ಮ ಒಡೆಯುವ ಕೆಲಸ ಮಾಡಬಾರದಿತ್ತು ಎಂದು ವಾಗ್ದಾಳಿ ನಡೆಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago