ರಾಜ್ಯ ನ್ಯೂಸ್

ಅಮಿತ್ ಶಾ ಭೇಟಿ ಹಿಂದೆ ರಾಜಕೀಯ ಇಲ್ಲ: ಶಿವಯೋಗ ಮಂದಿರದ ಅಧ್ಯಕ್ಷ ಸಂಗನಬಸವ ಸ್ವಾಮೀಜಿ

ಶಿವಯೋಗ ಮಂದಿರ ಒಂದು ರಾಜಕೀಯೇತರ ಸಂಸ್ಥೆಯಾಗಿದೆ. ಇಲ್ಲಿಗೆ ಯಾರೂ ಬೇಕಾದರೂ ಭೇಟಿ ಮಾಡಬಹುದು. ಈ ಹಿಂದೆ ರಾಜಕೀಯ ಮುಖಂಡರಾದ ಸೋನಿಯಾ ಗಾಂಧಿ, ಎಲ್.ಕೆ. ಅಡ್ವಾಣಿ ಭೇಟಿ ನೀಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಯ ಹಿಂದೆ ಯಾವುದೇ ರಾಜಕೀಯ ಇಲ್ಲ’ ಎಂದು ಶಿವಯೋಗ ಮಂದಿರದ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಹೇಳಿದರು.

ಬಾಗಲಕೋಟೆ: ‘ಶಿವಯೋಗ ಮಂದಿರ ಒಂದು ರಾಜಕೀಯೇತರ ಸಂಸ್ಥೆಯಾಗಿದೆ. ಇಲ್ಲಿಗೆ ಯಾರೂ ಬೇಕಾದರೂ ಭೇಟಿ ಮಾಡಬಹುದು. ಈ ಹಿಂದೆ ರಾಜಕೀಯ ಮುಖಂಡರಾದ ಸೋನಿಯಾ ಗಾಂಧಿ, ಎಲ್.ಕೆ. ಅಡ್ವಾಣಿ ಭೇಟಿ ನೀಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಯ ಹಿಂದೆ ಯಾವುದೇ ರಾಜಕೀಯ ಇಲ್ಲ’ ಎಂದು ಶಿವಯೋಗ ಮಂದಿರದ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಹೇಳಿದರು.

ಮಂಗಳವಾರ ಶಿವಯೋಗ ಮಂದಿರಕ್ಕೆ ಅಮಿತ್ ಶಾ ಅವರು ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿ ಅವರು ಮಾತನಾಡಿದರು.

‘ರಾಜಕೀಯ ಲಾಭ ಪಡೆಯುವುದು ‘ಶಾ’ ಅವರ ಉದ್ದೇಶವೂ ಆಗಿರಬಹುದು. ಆದರೆ ಶಿವಯೋಗ ಮಂದಿರ ಸ್ವಾಮೀಜಿಗಳನ್ನ ತಯಾರಿಸುವ ಸಂಸ್ಥೆಯಾಗಿದೆ. ಇಲ್ಲಿ ಎಲ್ಲಾ ಪಕ್ಷಗಳಿಗೂ ಮುಕ್ತ ಅವಕಾಶ ಇದೆ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ಅವರೂ ಇಲ್ಲಿಗೆ ಬರಬಹುದು’ ಎಂದರು.

‘ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ‌ಮಾನ್ಯತೆ ನೀಡಬಾರದು ಎಂದು ಅಮಿತ್ ಶಾ ಅವರಿಗೆ ಮನವಿ ಮಾಡಲಿದ್ದೇವೆ’ ಎಂದು ತಿಳಿಸಿದರು.

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ನಿಂತವರೆಲ್ಲರೂ ಲಿಂಗಧಾರಣೆ ಮಾಡಿಲ್ಲ. ಲಿಂಗಧಾರಣೆ ಅಂದರೆ ಏನು ಎನ್ನುವುದು ಗೊತ್ತಿಲ್ಲದವರು ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆ ಕೇಳುತ್ತಿದ್ದಾರೆ ಎಂದರು.

ಲಿಂಗಧಾರಣೆ ಮಾಡದವರಿಂದ ಬಸವಣ್ಣನವರ ಉಪದೇಶ ಕೇಳಬೇಕಾಗಿಲ್ಲ ನಾವು ಶೋಷಣೆಯ ವಿರುದ್ಧ ಇದ್ದವರು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ನಿರ್ಧಾರ ತೆಗೆದುಕೊಂಡಿದ್ದು ತಪ್ಪು, ಚುನಾವಣೆಯ ಹೊಸ್ತಿಲಲ್ಲಿ ಧರ್ಮ ಒಡೆಯುವ ಕೆಲಸ ಮಾಡಬಾರದಿತ್ತು ಎಂದು ವಾಗ್ದಾಳಿ ನಡೆಸಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago