ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ಜನಜಾಗೃತಿ ಹೆಸರಿನಲ್ಲಿ ಸಮಾವೇಶ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ 19ರಂದು ಮಂಗಳೂರಿಗೆ ಭೇಟಿ ನೀಡುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಅಮಿತ್ ಶಾ’ ಹೆಸರಿನಲ್ಲಿ ಚಳವಳಿ ನಡೆಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಕಟಿಸಿದೆ.
ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾ ತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ‘ದಕ್ಷಿಣ ಕನ್ನಡ ಜಿಲ್ಲೆ ಈಗ ಶಾಂತ ಸ್ಥಿತಿಗೆ ಮರಳುತ್ತಿದೆ. ಈ ಹಂತದಲ್ಲಿ ಅಮಿತ್ ಶಾ ಭೇಟಿ ನೀಡಿದರೆ ಮತ್ತೆ ಪ್ರಚೋದನೆಗೆ ಕಾರಣವಾಗುತ್ತದೆ. ಆದ್ದರಿಂದ ಅವರ ಭೇಟಿಗೆ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು.
‘ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ರಾಜಕೀಯ ಪಕ್ಷವೇ ಪ್ರತಿಭಟನಕಾರರ ವಿರುದ್ಧ ಯುದ್ಧಕ್ಕೆ ಇಳಿದಂತೆ ವರ್ತಿಸಬಾರದು. ಅಮಿತ್ ಶಾ ಭೇಟಿಯಿಂದ ಜಿಲ್ಲೆಯಲ್ಲಿ ಶಾಂತಿ ಕದಡುತ್ತದೆ. ಅದನ್ನು ವಿರೋಧಿಸಿ ನಾವು ಉಪವಾಸ ಸತ್ಯಾಗ್ರಹ ನಡೆಸುತ್ತೇವೆ’ ಎಂದು ಐವನ್ ಡಿಸೋಜ ತಿಳಿಸಿದರು.
ಗೋಲಿಬಾರ್ ನಲ್ಲಿ ಮೃತಪಟ್ಟವರ ಮನೆಗಳಿಗೆ ಈವರೆಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರು ಭೇಟಿ ನೀಡಿಲ್ಲ. ಕೇಂದ್ರ ಗೃ ಸಚಿವರು ರಾಜಕೀಯ ಮಾಡಲು ಬರುವುದನ್ನು ಮುಂದೂಡಿ, ಸಚಿವರು ಶಾಸಕರನ್ನು ಸಂತ್ರಸ್ತರ ಮನೆಗಳಿಗೆ ಕಳುಹಿಸಲಿ ಎಂದರು.
ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿಯ ಸದಸ್ಯರೇ ಹಿಂಸಾಚಾರ ನಡೆಸಿರುವ ಆರೋಪವಿದೆ. ದೆಹಲಿ ಪೊಲೀಸರು ಮತ್ತು ವಿಶ್ವವಿದ್ಯಾಲಯದ ಆಡಳಿತದ ಬೆಂಬಲದಲ್ಲೇ ಎಲ್ಲವೂ ನಡೆದಿದೆ ಎಂದು ದೂರಿದರು.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…