ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ಜನಜಾಗೃತಿ ಹೆಸರಿನಲ್ಲಿ ಸಮಾವೇಶ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ 19ರಂದು ಮಂಗಳೂರಿಗೆ ಭೇಟಿ ನೀಡುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಅಮಿತ್ ಶಾ’ ಹೆಸರಿನಲ್ಲಿ ಚಳವಳಿ ನಡೆಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಕಟಿಸಿದೆ.
ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾ ತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ‘ದಕ್ಷಿಣ ಕನ್ನಡ ಜಿಲ್ಲೆ ಈಗ ಶಾಂತ ಸ್ಥಿತಿಗೆ ಮರಳುತ್ತಿದೆ. ಈ ಹಂತದಲ್ಲಿ ಅಮಿತ್ ಶಾ ಭೇಟಿ ನೀಡಿದರೆ ಮತ್ತೆ ಪ್ರಚೋದನೆಗೆ ಕಾರಣವಾಗುತ್ತದೆ. ಆದ್ದರಿಂದ ಅವರ ಭೇಟಿಗೆ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು.
‘ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ರಾಜಕೀಯ ಪಕ್ಷವೇ ಪ್ರತಿಭಟನಕಾರರ ವಿರುದ್ಧ ಯುದ್ಧಕ್ಕೆ ಇಳಿದಂತೆ ವರ್ತಿಸಬಾರದು. ಅಮಿತ್ ಶಾ ಭೇಟಿಯಿಂದ ಜಿಲ್ಲೆಯಲ್ಲಿ ಶಾಂತಿ ಕದಡುತ್ತದೆ. ಅದನ್ನು ವಿರೋಧಿಸಿ ನಾವು ಉಪವಾಸ ಸತ್ಯಾಗ್ರಹ ನಡೆಸುತ್ತೇವೆ’ ಎಂದು ಐವನ್ ಡಿಸೋಜ ತಿಳಿಸಿದರು.
ಗೋಲಿಬಾರ್ ನಲ್ಲಿ ಮೃತಪಟ್ಟವರ ಮನೆಗಳಿಗೆ ಈವರೆಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರು ಭೇಟಿ ನೀಡಿಲ್ಲ. ಕೇಂದ್ರ ಗೃ ಸಚಿವರು ರಾಜಕೀಯ ಮಾಡಲು ಬರುವುದನ್ನು ಮುಂದೂಡಿ, ಸಚಿವರು ಶಾಸಕರನ್ನು ಸಂತ್ರಸ್ತರ ಮನೆಗಳಿಗೆ ಕಳುಹಿಸಲಿ ಎಂದರು.
ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿಯ ಸದಸ್ಯರೇ ಹಿಂಸಾಚಾರ ನಡೆಸಿರುವ ಆರೋಪವಿದೆ. ದೆಹಲಿ ಪೊಲೀಸರು ಮತ್ತು ವಿಶ್ವವಿದ್ಯಾಲಯದ ಆಡಳಿತದ ಬೆಂಬಲದಲ್ಲೇ ಎಲ್ಲವೂ ನಡೆದಿದೆ ಎಂದು ದೂರಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…