ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ಜನಜಾಗೃತಿ ಹೆಸರಿನಲ್ಲಿ ಸಮಾವೇಶ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ 19ರಂದು ಮಂಗಳೂರಿಗೆ ಭೇಟಿ ನೀಡುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಅಮಿತ್ ಶಾ’ ಹೆಸರಿನಲ್ಲಿ ಚಳವಳಿ ನಡೆಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಕಟಿಸಿದೆ.
ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾ ತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ‘ದಕ್ಷಿಣ ಕನ್ನಡ ಜಿಲ್ಲೆ ಈಗ ಶಾಂತ ಸ್ಥಿತಿಗೆ ಮರಳುತ್ತಿದೆ. ಈ ಹಂತದಲ್ಲಿ ಅಮಿತ್ ಶಾ ಭೇಟಿ ನೀಡಿದರೆ ಮತ್ತೆ ಪ್ರಚೋದನೆಗೆ ಕಾರಣವಾಗುತ್ತದೆ. ಆದ್ದರಿಂದ ಅವರ ಭೇಟಿಗೆ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು.
‘ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ರಾಜಕೀಯ ಪಕ್ಷವೇ ಪ್ರತಿಭಟನಕಾರರ ವಿರುದ್ಧ ಯುದ್ಧಕ್ಕೆ ಇಳಿದಂತೆ ವರ್ತಿಸಬಾರದು. ಅಮಿತ್ ಶಾ ಭೇಟಿಯಿಂದ ಜಿಲ್ಲೆಯಲ್ಲಿ ಶಾಂತಿ ಕದಡುತ್ತದೆ. ಅದನ್ನು ವಿರೋಧಿಸಿ ನಾವು ಉಪವಾಸ ಸತ್ಯಾಗ್ರಹ ನಡೆಸುತ್ತೇವೆ’ ಎಂದು ಐವನ್ ಡಿಸೋಜ ತಿಳಿಸಿದರು.
ಗೋಲಿಬಾರ್ ನಲ್ಲಿ ಮೃತಪಟ್ಟವರ ಮನೆಗಳಿಗೆ ಈವರೆಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರು ಭೇಟಿ ನೀಡಿಲ್ಲ. ಕೇಂದ್ರ ಗೃ ಸಚಿವರು ರಾಜಕೀಯ ಮಾಡಲು ಬರುವುದನ್ನು ಮುಂದೂಡಿ, ಸಚಿವರು ಶಾಸಕರನ್ನು ಸಂತ್ರಸ್ತರ ಮನೆಗಳಿಗೆ ಕಳುಹಿಸಲಿ ಎಂದರು.
ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿಯ ಸದಸ್ಯರೇ ಹಿಂಸಾಚಾರ ನಡೆಸಿರುವ ಆರೋಪವಿದೆ. ದೆಹಲಿ ಪೊಲೀಸರು ಮತ್ತು ವಿಶ್ವವಿದ್ಯಾಲಯದ ಆಡಳಿತದ ಬೆಂಬಲದಲ್ಲೇ ಎಲ್ಲವೂ ನಡೆದಿದೆ ಎಂದು ದೂರಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…