ಗದಗ : ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಏಪ್ರಿಲ್ 28 ರಂದು ನಡೆದಿದ್ದ ಬಿಜೆಪಿ ಬಹಿರಂಗ ಸಮಾವೇಶದಲ್ಲಿ ಕೂಲ್ ಡ್ರಿಂಕ್ಸ್ ವ್ಯಾಪಾರ ಮಾಡಲು ಬಂದಿದ್ದ ಸಮೀರ್ ಸಾಬ್, ನೆರದಿದ್ದ ಜನರ ವರ್ತನೆಯಿಂದ ನಷ್ಟ ಅನುಭವಿಸಿದ್ದ.. ಸಮೀರ್ ಗೆ ಆಗಿರೋ ನಷ್ಟವನ್ನ ಸಂಸದ ಪ್ರತಾಪ್ ಸಿಂಹ ಭರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮಧ್ಯರಾತ್ರಿ 12ರ ಸುಮಾರಿಗೆ ಸಮೀರ್ಗೆ ಫೋನ್ ಮಾಡಿದ್ದ ಪ್ರತಾಪ್ ಸಿಂಹ ನಷ್ಟವಾಗಿರೋ ಬಗ್ಗೆ ಮಾಹಿತಿ ಕೇಳಿದ್ದರು. ನಂತರ, ಸಮೀತರ್ ಒಟ್ಟಾರೆ 30 ಸಾವಿರ ನಷ್ಟವಾಗಿರಬಹುದು ಎಂದು ಹೇಳಿದ್ದರು. ಆದರೆ, ಪ್ರತಾಪ್ ಸಿಂಹ್ 35 ಸಾವಿರ ಹಣ ಪಾವತಿಸಿ ಸ್ಕ್ರೀನ್ ಶಾಟ್ ಸಮೇತ್ ಫೋಟೋ ಟ್ವೀಟ್ ಮಾಡಿದ್ದಾರೆ.. ಅದಲ್ಲದೆ, ಸಮೀರ್ ಸಾಬ್ ಗೆ ಹಣ ಕಳುಹಿಸಿದ್ದೇನೆ..ಸಾರಿ ಬ್ರದರ್, ಧನ್ಯವಾದ ಅಂತಾ ಬರೆದುಕೊಂಡಿದ್ದಾರೆ. ಸಂಸದ ಪ್ರತಾಪ್ ಸಿಂಹ ಮಾನವೀಯತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಏಪ್ರಿಲ್ 28 ರಂದು ಅಮಿತ್ ಶಾ ಲಕ್ಷ್ಮೇಶ್ವರ ಪಟ್ಟಣಕ್ಕೆ ಬಂದಿದ್ದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಪರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತಯಾಚನೆ ಮಾಡಿದ್ದರು. ಮಧ್ಯಾಹ್ನದ ಸಮಯ ಆಗಿದ್ದರಿಂದ ಜನ ಬಾಯಾರಿಕೆಯಿಂದ ಬಳಲಿ ಹೋಗಿದ್ದರು. ನೀತಿಸಂಹಿತೆ ಇರುವ ಕಾರಣದಿಂದ, ನೀರು ಊಟದ ವ್ಯವಸ್ಥೆ ಕಷ್ಟ ಅಂತಾ ಆಯೋಜಕರು ಮೈಕ್ ನಲ್ಲಿ ಹೇಳಿದ್ದರು.
ಆದರೆ, ಬಿಸಿಲಿನ ತಾಪ ತಾಳಲು ಸಾಧ್ಯವಾಗಿರಲಿಲ್ಲ. ಅಲ್ಲಿನ ಹೆಣ್ಣುಮಕ್ಕಳ ಒತ್ತಾಯಕ್ಕೆ ಮಣಿದು ನೀರಿನ ಪೌಚ್ಗಳನ್ನು ತರಿಸೋದಕ್ಕೆ ಆಯೋಜಕರು ಮುಂದಾಗಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತ, ಸಮೀರ್ ಅವರಿಗೆ 30 ನೀರಿನ ಪ್ಯಾಕೆಟ್ಗಳನ್ನು ಆಯೋಜಕರು ಆರ್ಡರ್ ಕೊಟ್ಟಿದ್ದರು. ಸಮೀರ್ ಕೂಲ್ ಡ್ರಿಂಕ್ಸ್ ಇರುವ ವಾಹನದಲ್ಲಿ ನೀರಿನ ಪ್ಯಾಕೆಟ್ ತುಂಬಿಕೊಂಡು ಸಮಾವೇಶ ನಡೆಯುವ ಸ್ಥಳಕ್ಕೆ ಬಂದಿದ್ದರು.
ಇನ್ನೇನು ನೀರಿನ ಪ್ಯಾಕೆಟ್ಗಳನ್ನು ಇಳಿಸಿ ವಾಪಾಸ್ ತೆರಳು ಸಮೀರ್ ಮುಂದಾಗುವಾಗ ಆಯೋಜಕರು ಜನರು ಇದ್ದ ಕಡೆ ನೀರಿ ಪ್ಯಾಕೆಟ್ಗಳನ್ನು ಇಳಿಸುವಂತೆ ಸಮೀರ್ಗೆ ಸೂಚನೆ ನೀಡಿದ್ದರು. ಮೊದಲೇ ಬಾಯಾರಿಕೆಯಿಂದ ಬೇಸತ್ತಿದ್ದ ಜನ, ನೀರಿನ ಗಾಡಿ ನೋಡಿ, ಆಯೋಜಕರೇ ವ್ಯವಸ್ಥೆ ಮಾಡಿದ್ದಾರೆ ಅಂತಾ ಅಲ್ಲಿದ್ದ ನೀರಿನ ಬಾಟಲ್ಗಳೊಂದಿಗೆ ಬಹುತೇಕ ಕೂಲ್ ಡ್ರಿಂಕ್ಸ್ ಖಾಲಿ ಮಾಡಿದ್ದರು. ಮುಗಿಬಿದ್ದು ಗಾಡಿ ಮೇಲೆ ಹತ್ತಿ ನೀರಿನ ಬಾಟಲ್ ತೆಗೆದುಕೊಂಡಿದ್ದರು. ಜನರನ್ನ ಕಂಟ್ರೋಲ್ ಮಾಡಲು ಸಾಧ್ಯವಾಗದೇ, ಸಮೀರ್ ಕಣ್ಣೀರು ಹಾಕುತ್ತ ಅಸಹಾಯಕರಾಗಿ ನಿಂತಿದ್ದರು. ನಂತರ ಪೊಲೀಸರು ಸ್ಥಳಕ್ಕೆ ಬಂದು ಜನರನ್ನ ಚದುರಿಸಿದರೂ, ಅದಾಗಲೇ ದೊಡ್ಡ ನಷ್ಟ ಸಮೀರ್ಗೆ ಆಗಿತ್ತು. ಇದರಿಂದಾಗಿ ಸ್ಥಳದಿಂದ ಅಳುತ್ತಲೇ ಸಮೀರ್ ಹೊರ ನಡೆದಿದ್ದರು.
ಸಮೀರ್ ಅವರು ವಾಹನದಲ್ಲಿಯೇ ಕುಳಿತು ಅತ್ತಿದ್ದ ವಿಡಿಯೊ ವೈರಲ್ ಆಗಿತ್ತು. ಮಾಧ್ಯಮಗಳೂ ವರದಿ ಮಾಡಿದ್ದವು. ಇದನ್ನು ಮನಗಂಡ ಪ್ರತಾಪ್ ಸಿಂಹ ಅವರು, ಸಮೀರ್ ಅವರಿಗೆ 35 ಸಾವಿರ ರೂಪಾಯಿಯನ್ನು ಆನ್ಲೈನ್ ಮೂಲಕ ವರ್ಗಾಯಿಸಿದ್ದಾರೆ.
ಪ್ರತಾಪ್ ಸಿಂಹ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಕುರಿತು ಟ್ವೀಟ್ ಮಾಡಿದ ಪ್ರತಾಪ್ ಸಿಂಹ, ಸಮೀರ್ ಹಸನ್ ಸಾಬ್ಗೆ ಹಣ ಕಳುಹಿಸಿದ್ದೇನೆ. ಸಾರಿ ಬ್ರದರ್, ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಸಮೀರ್ ಸಾಬ್ಗೆ ನಷ್ಟವಾದ ಕಾರಣ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈಗ ನಷ್ಟ ಪಾವತಿಸುವ ಮೂಲಕ ಪ್ರತಾಪ್ ಸಿಂಹ ಅವರು ಯುವಕನ ನೆರವಿಗೆ ನಿಂತಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…