ನಟಿ ಅಮೂಲ್ಯ ಅವರ ಇಬ್ಬರು ಮಕ್ಕಳ ಕೊರಳಲ್ಲೂ ಹುಲಿ ಉಗುರಿನ ಪೆಂಡೆಂಟ್ ಇದೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅನೇಕರು ಅಮೂಲ್ಯ ಅವರಿಗೆ ಪ್ರಶ್ನೆ ಮಾಡಿದ್ದರು. ಈ ಕುರಿತಂತೆ ಅಮೂಲ್ಯ ಸ್ಪಷ್ಟನೆ ನೀಡಿದ್ದಾರೆ. ಅವುಗಳು ಅಸಲಿ ಉಗುರುಗಳೇ ಅಲ್ಲ ಎಂದು ಹೇಳಿದ್ದಾರೆ.
ಮಕ್ಕಳ ನಾಮಕರಣದ ವೇಳೆ ಧರಿಸಿದ್ದ ಪೆಂಡೆಂಟ್ ನಲ್ಲಿಯ ಹುಲಿ ಉಗುರು ಅಸಲಿ ಅಲ್ಲ. ಸಿಂಥೆಟಿಕ್ ಹುಲಿ ಉಗುರು ಅವು. ಅಂತಹ ನಕಲಿ ಉಗುರುಗಳು 500-600ಗೆ ಸಿಗುತ್ತವೆ. ಅರಣ್ಯ ಅಧಿಕಾರಿಗಳು ಪರಿಶೀಲನೆಗೆ ಬಂದರೆ ಖಂಡಿತಾ ಅವುಗಳನ್ನು ನೀಡುತ್ತೇನೆ ಎಂದಿದ್ದಾರೆ ನಟಿ ಅಮೂಲ್ಯ. ಉಗುರುಗಳು ಅಸಲಿಯಲ್ಲ ಎನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ.
ವರ್ತೂರ್ ಸಂತೋಷ್ ಬಂಧನವಾಗುತ್ತಿದ್ದಂತೆಯೇ ಹುಲಿ ಉಗುರಿನ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳ ಮೇಲೆ ಸಾಮಾನ್ಯ ಜನರು ಮುಗಿ ಬಿದ್ದಿದ್ದಾರೆ. ಸಿನಿಮಾ ನಟರು, ಸಂನ್ಯಾಸಿಗಳು, ರಾಜಕಾರಣಿಗಳು ಹೀಗೆ ಅನೇಕರು ಹುಲಿ ಉಗುರು ಧರಿಸಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ಸಮರ್ಥನೆಯನ್ನು ಮಾಡುತ್ತಿದ್ದಾರೆ.
ವರ್ತೂರ್ ಸಂತೋಷ್ ಮತ್ತು ಅರಣ್ಯಾಧಿಕಾರಿ ದರ್ಶನ್ ಹಾಗೂ ಇಬ್ಬರು ಅರ್ಚಕರನ್ನು ಈವರೆಗೂ ಬಂಧಿಸಲಾಗಿದೆ. ಸಂತೋಷ್ ಗೆ ನಿನ್ನೆ ಜಾಮೀನು ಮಂಜೂರಾಗಿ ಜೈಲಿನಿಂದ ಹೊರ ಬಂದಿದ್ದಾರೆ. ಉಳಿದಂತೆ ಅರಣ್ಯಾಧಿಕಾರಿಗಳು ತನಿಖೆಯನ್ನು ಮುಂದುವರೆಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…