Featured

ಅಮೃತಸರ ರೈಲು ದುರಂತ : ರೈಲು ಹರಿದು 62 ಸಾವು

ಅಮೃತಸರ: ಹಳಿ ಮೇಲೆ ನಿಂತು ರಾವಣ, ಮೇಘನಾದರ ಪ್ರತಿಕೃತಿ ದಹನ ಕಾರ್ಯಕ್ರಮ ನೋಡುತ್ತಿ ದ್ದವರ ಮೇಲೆ ರೈಲು ಸಂಚರಿಸಿ ಕನಿಷ್ಠ 62 ಮಂದಿ ಅಸುನೀ ಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ  ಪಂಜಾಬ್‌ನ ಅಮೃತಸರದಲ್ಲಿ ಸಂಭವಿಸಿದೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಜಲಂಧರ್‌ನಿಂದ  ಅಮೃತಸರಕ್ಕೆ ಬರುತ್ತಿದ್ದ ಡೆಮು ರೈಲು ಹಳಿಯ ಮೇಲೆ ನಿಂತಿದ್ದ ಜನರ ಮೇಲೆಯೇ ಸಂಚರಿಸಿತು. ಸ್ಥಳದಲ್ಲಿ 700ಕ್ಕೂ ಅಧಿಕ ಮಂದಿ ಸೇರಿದ್ದರು ಎಂದು ಸ್ಥಳೀಯ ಆಡಳಿತಾಧಿಕಾರಿ ಹೇಳಿದ್ದಾರೆ.

ಅಮೃತಸರ ರೈಲ್ವೇ ಸ್ಟೇಶನ್‌ನಿಂದ 2 ಕಿ.ಮೀ.ದೂರದಲ್ಲಿರುವ ಧೋಬಿ ಘಾಟ್‌ನ ರೈಲ್ವೆ ಹಳಿ ಬಳಿ ಸುಮಾರು 700ರಷ್ಟು ಮಂದಿ ಜಮಾಯಿಸಿ ರಾವಣನ ಪ್ರತಿಕೃತಿ ದಹನದ ದೃಶ್ಯ ನೋಡುತ್ತಿದ್ದರು. ಈ ವೇಳೆ ಪಟಾಕಿ ಸಿಡಿಸಿದ ಕಾರಣ ಎಕ್ಸ್‌ಪ್ರೆಸ್ ರೈಲು ಆಗಮಿಸಿದ್ದು ಅಲ್ಲಿದ್ದ ಜನರಿಗೆ ಗೊತ್ತಾಗಲಿಲ್ಲ. ಕೆಲವೇ ನಿಮಿಷದಲ್ಲಿ ರೈಲು ಜನರ ಮೇಲೆ ಹರಿದು ಹೋಗಿತ್ತು

ಸ್ಥಳೀಯರು ಆರೋಪಿಸಿರುವಂತೆ ರೈಲ್ವೇ ಇಲಾಖೆಯೇ ದುರಂತಕ್ಕೆ ಕಾರಣ. ರೈಲು ಬರುವ ಬಗ್ಗೆ ಮುನ್ನೆಚ್ಚರಿಕೆಯನ್ನೇ ನೀಡಿರಲಿಲ್ಲ. ಜತೆಗೆ ಸ್ಥಳೀಯ ದಸರಾ ಉತ್ಸವ ಆಯೋಜನಾ ಸಮಿತಿಯೂ ಈ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು ಎಂದಿದ್ದಾರೆ. ಪ್ರಧಾನಿ ಮೋದಿ ಘಟನೆಗೆ ಶೋಕ ವ್ಯಕ್ತಪಡಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಬಗ್ಗೆ ಸೂಚಿಸಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಆಘಾತ ವ್ಯಕ್ತಪಡಿಸಿದ್ದಾರೆ. ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಉಸ್ತುವಾರಿಗೆ ಆರೋಗ್ಯ, ಗೃಹ ಕಾರ್ಯದರ್ಶಿಗಳನ್ನು ºರು ಸಚಿವರನ್ನು ಕಳುಹಿಸಿ ಕೊಟ್ಟಿದ್ದಾರೆ. ಗಾಯಗೊಂಡ ಎಲ್ಲರಿಗೂ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಅಸುನೀಗಿದ ವ್ಯಕ್ತಿಗಳ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago