Featured

ಅಮೃತಸರ ರೈಲು ದುರಂತ : ರೈಲು ಹರಿದು 62 ಸಾವು

ಅಮೃತಸರ: ಹಳಿ ಮೇಲೆ ನಿಂತು ರಾವಣ, ಮೇಘನಾದರ ಪ್ರತಿಕೃತಿ ದಹನ ಕಾರ್ಯಕ್ರಮ ನೋಡುತ್ತಿ ದ್ದವರ ಮೇಲೆ ರೈಲು ಸಂಚರಿಸಿ ಕನಿಷ್ಠ 62 ಮಂದಿ ಅಸುನೀ ಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ  ಪಂಜಾಬ್‌ನ ಅಮೃತಸರದಲ್ಲಿ ಸಂಭವಿಸಿದೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಜಲಂಧರ್‌ನಿಂದ  ಅಮೃತಸರಕ್ಕೆ ಬರುತ್ತಿದ್ದ ಡೆಮು ರೈಲು ಹಳಿಯ ಮೇಲೆ ನಿಂತಿದ್ದ ಜನರ ಮೇಲೆಯೇ ಸಂಚರಿಸಿತು. ಸ್ಥಳದಲ್ಲಿ 700ಕ್ಕೂ ಅಧಿಕ ಮಂದಿ ಸೇರಿದ್ದರು ಎಂದು ಸ್ಥಳೀಯ ಆಡಳಿತಾಧಿಕಾರಿ ಹೇಳಿದ್ದಾರೆ.

ಅಮೃತಸರ ರೈಲ್ವೇ ಸ್ಟೇಶನ್‌ನಿಂದ 2 ಕಿ.ಮೀ.ದೂರದಲ್ಲಿರುವ ಧೋಬಿ ಘಾಟ್‌ನ ರೈಲ್ವೆ ಹಳಿ ಬಳಿ ಸುಮಾರು 700ರಷ್ಟು ಮಂದಿ ಜಮಾಯಿಸಿ ರಾವಣನ ಪ್ರತಿಕೃತಿ ದಹನದ ದೃಶ್ಯ ನೋಡುತ್ತಿದ್ದರು. ಈ ವೇಳೆ ಪಟಾಕಿ ಸಿಡಿಸಿದ ಕಾರಣ ಎಕ್ಸ್‌ಪ್ರೆಸ್ ರೈಲು ಆಗಮಿಸಿದ್ದು ಅಲ್ಲಿದ್ದ ಜನರಿಗೆ ಗೊತ್ತಾಗಲಿಲ್ಲ. ಕೆಲವೇ ನಿಮಿಷದಲ್ಲಿ ರೈಲು ಜನರ ಮೇಲೆ ಹರಿದು ಹೋಗಿತ್ತು

ಸ್ಥಳೀಯರು ಆರೋಪಿಸಿರುವಂತೆ ರೈಲ್ವೇ ಇಲಾಖೆಯೇ ದುರಂತಕ್ಕೆ ಕಾರಣ. ರೈಲು ಬರುವ ಬಗ್ಗೆ ಮುನ್ನೆಚ್ಚರಿಕೆಯನ್ನೇ ನೀಡಿರಲಿಲ್ಲ. ಜತೆಗೆ ಸ್ಥಳೀಯ ದಸರಾ ಉತ್ಸವ ಆಯೋಜನಾ ಸಮಿತಿಯೂ ಈ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು ಎಂದಿದ್ದಾರೆ. ಪ್ರಧಾನಿ ಮೋದಿ ಘಟನೆಗೆ ಶೋಕ ವ್ಯಕ್ತಪಡಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಬಗ್ಗೆ ಸೂಚಿಸಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಆಘಾತ ವ್ಯಕ್ತಪಡಿಸಿದ್ದಾರೆ. ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಉಸ್ತುವಾರಿಗೆ ಆರೋಗ್ಯ, ಗೃಹ ಕಾರ್ಯದರ್ಶಿಗಳನ್ನು ºರು ಸಚಿವರನ್ನು ಕಳುಹಿಸಿ ಕೊಟ್ಟಿದ್ದಾರೆ. ಗಾಯಗೊಂಡ ಎಲ್ಲರಿಗೂ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಅಸುನೀಗಿದ ವ್ಯಕ್ತಿಗಳ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago