Featured

ಅಮೆರಿಕದಲ್ಲಿ ‘ಕೋವಿಡ್‌ 19‘ ಸಾಂಕ್ರಾಮಿಕದಿಂದ ಸತ್ತವರ ಸಂಖ್ಯೆ 5 ಲಕ್ಷ ! Vishwanews24

ಅಮೆರಿಕದಲ್ಲಿ ‘ಕೋವಿಡ್‌ 19‘ ಸಾಂಕ್ರಾಮಿಕದಿಂದ ಸತ್ತವರ ಸಂಖ್ಯೆ 5 ಲಕ್ಷ ! Vishwanews24

ವಾಷಿಂಗ್ಟನ್‌: ಅಮೆರಿಕದಲ್ಲಿ ‘ಕೋವಿಡ್‌ 19‘ ಸಾಂಕ್ರಾಮಿಕದಿಂದ ಸತ್ತವರ ಸಂಖ್ಯೆ 5 ಲಕ್ಷ ತಲುಪುತ್ತಿದೆ.

ಕೋವಿಡ್‌ ಸಾಂಕ್ರಾಮಿಕ ಆವರಿಸಿ ಒಂದು ವರ್ಷ ಕಳೆದಿದೆ. ಈ ಸೋಂಕಿಗೆ 4,98,000 ಜೀವಗಳು ಬಲಿಯಾಗಿವೆ. ಈ ಸಂಖ್ಯೆ ಅಂದಾಜು ಅಮೆರಿಕದ ಮಿಸ್ಸೂರಿಯ ಕಾನ್ಸಾಸ್ ನಗರದ ಜನಸಂಖ್ಯೆಗೆ ಸಮಾನವಾದದ್ದು. ಹೆಚ್ಚು ಕಡಿಮೆ ಅಟ್ಲಾಂಟಾದಷ್ಟೇ ಗಾತ್ರದ ಪ್ರದೇಶವಿದು. ಈ ಪ್ರಮಾಣದ ಸಾವುಗಳು ನಿಜಕ್ಕೂ ಆತಂಕಕಾರಿ.

ಜಾನ್ಸ್‌ ಹಾಪ್ಕಿನ್ಸ್‌ ವಿಶ್ವವಿದ್ಯಾಲಯ ಸಂಗ್ರಹಿಸಿದ ಈ ಅಂಕಿ– ಅಂಶಗಳು, 2019ರಲ್ಲಿ ದೀರ್ಘಕಾಲದಿಂದ ಉಸಿರಾಟದ ಸಮಸ್ಯೆಗಳನ್ನು ಹೊಂದಿರುವವರು, ಪಾರ್ಶ್ವವಾಯು ಪೀಡಿತರು, ಅಲ್ಜಮೈರ್, ಜ್ವರ ಮತ್ತು ನ್ಯುಮೋನಿಯಾಗಳಿಂದ ಸಾವನ್ನಪ್ಪಿದವರ ಸಂಖ್ಯೆಯನ್ನೂ ಮೀರಿಸುತ್ತದೆ.

ಉದ್ಯಾವರ: ಕಡೆಕಾರು, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ , ಉಪಾಧ್ಯಕ್ಷರಿಗೆ ಸನ್ಮಾನ -Vishwanews24

‘1918ರಲ್ಲಿ ಇನ್‌ಫ್ಲೂಯೆಂಜ ಸೋಂಕು ಹೊರತುಪಡಿಸಿದರೆ, ‌ಕಳೆದ 102 ವರ್ಷಗಳಲ್ಲಿ ಸೋಂಕಿನಿಂದ ಇಷ್ಟು ಪ್ರಮಾಣದಲ್ಲಿ ಸಾವನ್ನಪ್ಪಿದವರನ್ನು ದೇಶ ಕಂಡಿರಲಿಲ್ಲ‘ ಎಂದು ರಾಷ್ಟ್ರದ ಖ್ಯಾತ ಸೋಂಕು ರೋಗ ತಜ್ಞ ಡಾ. ಆಂಥೊನಿ ಫೌಸಿ ‘ಸಿಎನ್‌ಎನ್‌ ‘ಸ್ಟೇಟ್ ಆಫ್ ದಿ ಯೂನಿಯನ್‌‍‘ನಲ್ಲಿ ತಿಳಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ, ಈ ವರ್ಷದ ಜನವರಿ 19ರವರೆಗಿನ ಅಂಕಿ ಅಂಶಗಳ ಪ್ರಕಾರ, ಅಮೆರಿಕದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 4 ಲಕ್ಷ ತಲುಪಿತ್ತು.

ಬಹುಮತ ಸಾಬೀತುಪಡಿಸುವಲ್ಲಿ ವಿಫಲ : ಪುದುಚೇರಿ ಕಾಂಗ್ರೆಸ್ ಸರ್ಕಾರ ಪತನ ; ಸಿಎಂ ರಾಜೀನಾಮೆ -Vishwanews24

ಅಮೆರಿಕದಲ್ಲಿ ಕೊರೊನಾ ಸೋಂಕಿನಿಂದ ಮೊದಲ ಸಾವು ಸಂಭವಿಸಿದ್ದು  ಫೆಬ್ರವರಿ 2020ರ ಆರಂಭದಲ್ಲಿ. ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾ ಕೌಂಟಿಯಲ್ಲಿ ಈ ಸೋಂಕಿನಿಂದ ಇಬ್ಬರು ಮೃತಪಟ್ಟರು. ಅದಾದ ಮೇಲೆ, ನಾಲ್ಕು ತಿಂಗಳ ನಂತರ 1 ಲಕ್ಷ ಮಂದಿ ಸಾವನ್ನಪ್ಪಿದರು. ಸೆಪ್ಟೆಂಬರ್‌ ತಿಂಗಳಲ್ಲಿ ಈ ಸಾವಿನ ಪ್ರಮಾಣ 2 ಲಕ್ಷ ಮತ್ತು ಡಿಸೆಂಬರ್‌ನಲ್ಲಿ 3 ಲಕ್ಷಕ್ಕೆ ತಲುಪಿತು. ಆದರೆ, ಒಂದೇ ತಿಂಗಳಲ್ಲಿ ಸಾವಿನ ಸಂಖ್ಯೆ 3 ಲಕ್ಷದಿಂದ 4 ಲಕ್ಷಕ್ಕೆ ಏರಿತು. ಆ ನಂತರದ ಎರಡು ತಿಂಗಳಲ್ಲಿ ಸಾವಿನ ಸಂಖ್ಯೆ 4 ಲಕ್ಷದಿಂದ 5 ಲಕ್ಷದ ಅಂಚಿಗೆ ತಲುಪಿದೆ.

ಉಡುಪಿ: ಸ್ಥಳೀಯರಿಗೆ ಶುಲ್ಕ ವಿನಾಯತಿಗೆ ಆಗ್ರಹಿಸಿ ಹೆದ್ದಾರಿ ಜಾಗೃತಿ ಸಮಿತಿಯ ವತಿಯಿಂದ ಸಾಸ್ತಾನ ಟೋಲ್ ನಲ್ಲಿ ಬೃಹತ್ ಪ್ರತಿಭಟನೆ -Vishwanews24

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

6 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

7 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

7 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

7 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

8 hours ago