Featured

ಅಮೆರಿಕದಲ್ಲಿ ‘ಕೋವಿಡ್‌ 19‘ ಸಾಂಕ್ರಾಮಿಕದಿಂದ ಸತ್ತವರ ಸಂಖ್ಯೆ 5 ಲಕ್ಷ ! Vishwanews24

ಅಮೆರಿಕದಲ್ಲಿ ‘ಕೋವಿಡ್‌ 19‘ ಸಾಂಕ್ರಾಮಿಕದಿಂದ ಸತ್ತವರ ಸಂಖ್ಯೆ 5 ಲಕ್ಷ ! Vishwanews24

ವಾಷಿಂಗ್ಟನ್‌: ಅಮೆರಿಕದಲ್ಲಿ ‘ಕೋವಿಡ್‌ 19‘ ಸಾಂಕ್ರಾಮಿಕದಿಂದ ಸತ್ತವರ ಸಂಖ್ಯೆ 5 ಲಕ್ಷ ತಲುಪುತ್ತಿದೆ.

ಕೋವಿಡ್‌ ಸಾಂಕ್ರಾಮಿಕ ಆವರಿಸಿ ಒಂದು ವರ್ಷ ಕಳೆದಿದೆ. ಈ ಸೋಂಕಿಗೆ 4,98,000 ಜೀವಗಳು ಬಲಿಯಾಗಿವೆ. ಈ ಸಂಖ್ಯೆ ಅಂದಾಜು ಅಮೆರಿಕದ ಮಿಸ್ಸೂರಿಯ ಕಾನ್ಸಾಸ್ ನಗರದ ಜನಸಂಖ್ಯೆಗೆ ಸಮಾನವಾದದ್ದು. ಹೆಚ್ಚು ಕಡಿಮೆ ಅಟ್ಲಾಂಟಾದಷ್ಟೇ ಗಾತ್ರದ ಪ್ರದೇಶವಿದು. ಈ ಪ್ರಮಾಣದ ಸಾವುಗಳು ನಿಜಕ್ಕೂ ಆತಂಕಕಾರಿ.

ಜಾನ್ಸ್‌ ಹಾಪ್ಕಿನ್ಸ್‌ ವಿಶ್ವವಿದ್ಯಾಲಯ ಸಂಗ್ರಹಿಸಿದ ಈ ಅಂಕಿ– ಅಂಶಗಳು, 2019ರಲ್ಲಿ ದೀರ್ಘಕಾಲದಿಂದ ಉಸಿರಾಟದ ಸಮಸ್ಯೆಗಳನ್ನು ಹೊಂದಿರುವವರು, ಪಾರ್ಶ್ವವಾಯು ಪೀಡಿತರು, ಅಲ್ಜಮೈರ್, ಜ್ವರ ಮತ್ತು ನ್ಯುಮೋನಿಯಾಗಳಿಂದ ಸಾವನ್ನಪ್ಪಿದವರ ಸಂಖ್ಯೆಯನ್ನೂ ಮೀರಿಸುತ್ತದೆ.

ಉದ್ಯಾವರ: ಕಡೆಕಾರು, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ , ಉಪಾಧ್ಯಕ್ಷರಿಗೆ ಸನ್ಮಾನ -Vishwanews24

‘1918ರಲ್ಲಿ ಇನ್‌ಫ್ಲೂಯೆಂಜ ಸೋಂಕು ಹೊರತುಪಡಿಸಿದರೆ, ‌ಕಳೆದ 102 ವರ್ಷಗಳಲ್ಲಿ ಸೋಂಕಿನಿಂದ ಇಷ್ಟು ಪ್ರಮಾಣದಲ್ಲಿ ಸಾವನ್ನಪ್ಪಿದವರನ್ನು ದೇಶ ಕಂಡಿರಲಿಲ್ಲ‘ ಎಂದು ರಾಷ್ಟ್ರದ ಖ್ಯಾತ ಸೋಂಕು ರೋಗ ತಜ್ಞ ಡಾ. ಆಂಥೊನಿ ಫೌಸಿ ‘ಸಿಎನ್‌ಎನ್‌ ‘ಸ್ಟೇಟ್ ಆಫ್ ದಿ ಯೂನಿಯನ್‌‍‘ನಲ್ಲಿ ತಿಳಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ, ಈ ವರ್ಷದ ಜನವರಿ 19ರವರೆಗಿನ ಅಂಕಿ ಅಂಶಗಳ ಪ್ರಕಾರ, ಅಮೆರಿಕದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 4 ಲಕ್ಷ ತಲುಪಿತ್ತು.

ಬಹುಮತ ಸಾಬೀತುಪಡಿಸುವಲ್ಲಿ ವಿಫಲ : ಪುದುಚೇರಿ ಕಾಂಗ್ರೆಸ್ ಸರ್ಕಾರ ಪತನ ; ಸಿಎಂ ರಾಜೀನಾಮೆ -Vishwanews24

ಅಮೆರಿಕದಲ್ಲಿ ಕೊರೊನಾ ಸೋಂಕಿನಿಂದ ಮೊದಲ ಸಾವು ಸಂಭವಿಸಿದ್ದು  ಫೆಬ್ರವರಿ 2020ರ ಆರಂಭದಲ್ಲಿ. ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾ ಕೌಂಟಿಯಲ್ಲಿ ಈ ಸೋಂಕಿನಿಂದ ಇಬ್ಬರು ಮೃತಪಟ್ಟರು. ಅದಾದ ಮೇಲೆ, ನಾಲ್ಕು ತಿಂಗಳ ನಂತರ 1 ಲಕ್ಷ ಮಂದಿ ಸಾವನ್ನಪ್ಪಿದರು. ಸೆಪ್ಟೆಂಬರ್‌ ತಿಂಗಳಲ್ಲಿ ಈ ಸಾವಿನ ಪ್ರಮಾಣ 2 ಲಕ್ಷ ಮತ್ತು ಡಿಸೆಂಬರ್‌ನಲ್ಲಿ 3 ಲಕ್ಷಕ್ಕೆ ತಲುಪಿತು. ಆದರೆ, ಒಂದೇ ತಿಂಗಳಲ್ಲಿ ಸಾವಿನ ಸಂಖ್ಯೆ 3 ಲಕ್ಷದಿಂದ 4 ಲಕ್ಷಕ್ಕೆ ಏರಿತು. ಆ ನಂತರದ ಎರಡು ತಿಂಗಳಲ್ಲಿ ಸಾವಿನ ಸಂಖ್ಯೆ 4 ಲಕ್ಷದಿಂದ 5 ಲಕ್ಷದ ಅಂಚಿಗೆ ತಲುಪಿದೆ.

ಉಡುಪಿ: ಸ್ಥಳೀಯರಿಗೆ ಶುಲ್ಕ ವಿನಾಯತಿಗೆ ಆಗ್ರಹಿಸಿ ಹೆದ್ದಾರಿ ಜಾಗೃತಿ ಸಮಿತಿಯ ವತಿಯಿಂದ ಸಾಸ್ತಾನ ಟೋಲ್ ನಲ್ಲಿ ಬೃಹತ್ ಪ್ರತಿಭಟನೆ -Vishwanews24

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago