Featured

ಅಮೋಘ ವಿಜಯದ ಈ ದಿನ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ವಿಶೇಷ ಲೇಖನ

ಕಾರ್ಗಿಲ್ ಯುದ್ಧವಾಗಿ ಇಂದಿಗೆ 19 ವರ್ಷಗಳೇ ಕಳೆದಿವೆ. ಎಂದೂ ಮರೆಯದ ಅಮೋಘ ವಿಜಯದ ಮೆಲುಕು ಹಾಕೋಣ.. ಆ ಹುತಾತ್ಮ ಯೋಧರಿಗೆ ನಮಿಸೋಣ…

ಕಾಶ್ಮೀರದ ಶ್ರೀನಗರದಿಂದ 205ಕಿ.ಮೀ.ಗಳ ದೂರದಲ್ಲಿರುವ ಕಾರ್ಗಿಲ್ ಕಠಿಣವಾದ ನೀರ್ಗಲ್ಲುಗಳಿಂದ ಆವೃತವಾದ, ಪ್ರಪಂಚದ ಕೆಲವು ಅತ್ಯಂತ ಎತ್ತರದ ಪರ್ವತಗಳಿಂದ ಕೂಡಿದ ಲಡಾಖ್ ಶ್ರೇಣಿಗೆ ಸೇರಿದ ಪ್ರದೇಶ. ಶ್ರೀನಗರ ಮತ್ತು ಲೇಹ್ ಪ್ರದೇಶಕ್ಕೆ ಇರುವ ಏಕೈಕ ಭೂಮಾರ್ಗ. ಅತ್ಯಂತ ಕ್ಲಿಷ್ಟ ಮತ್ತು ದುರ್ಗಮವಾದ ಭೂ ಸರಹದ್ದು. ವರ್ಷದ ಮುಕ್ಕಾಲು ಅವಧಿಯಲ್ಲಿ 48 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಶೀತಲ ಮರಭೂಮಿ. 160ಕಿ.ಮೀ.ಗಳ ಹಿಮಚ್ಛಾದಿತ ಪರ್ವತ ಹೊಂದಿರುವ ಊಹಾತೀತ ಸ್ಥಳ.

ಕಾಶ್ಮೀರವನ್ನು ತನ್ನದಾಗಿಸಿಕೊಳ್ಳಬೇಕು. ಸಿಯಾಚಿನ್ ನೀರ್ಗಲ್ಲಿನ ಮೇಲೆ ಸಂಪೂರ್ಣ ಒಡೆತನ ಹೊಂದಬೇಕೆಂಬ ದುರಾಸೆಗೆ ಮತ್ತು ಅಂತಾರಾಷ್ಟ್ರೀಯ ಗಮನ ತನ್ನತ್ತ ಸೆಳೆದುಕೊಳ್ಳಲು ಪಾಕ್ ಈ ಪ್ರದೇಶಕ್ಕೆ ತನ್ನ ಸೇನೆ ನುಗ್ಗಿಸಿತ್ತು. ಈ ಆಕ್ರಮಣಕ್ಕೆ ಪಾಕಿಸ್ತಾನಕ್ಕೀ ಸೇನೆ ಕೊಟ್ಟ ಹೆಸರು `ಆಪರೇಷನ್ ಬದ್ರ್’.

ಭಾರತೀಯ ಭೂಸೇನೆ ಮತ್ತು ವಾಯುಸೇನಾ ಪಡೆಗಳು ಜಂಟಿಯಾಗಿ ಮೇ ಮತ್ತು ಜುಲೈ 1999ರಲ್ಲಿ ಜಯಿಸಿದ್ದು ಕಾರ್ಗಿಲ್ ಕದನ. ಈ ಕ್ರಿಯೆಗೆ ಕೊಟ್ಟ ನಾಮಧೇಯ `ಆಪರೇಶನ್ ವಿಜಯ್’. ಭಾರತೀಯ ಸೇನಾ ಇತಿಹಾಸದಲ್ಲೇ ಅತ್ಯಂತ ಮಹತ್ತರವಾದ ವಿಜಯವದು. ಸಮುದ್ರಮಟ್ಟದಿಂದ ಅತೀ ಎತ್ತರ ಪ್ರದೇಶದಲ್ಲಿ ನಡೆದ ಮೊದಲ ಯುದ್ಧವೂ ಹೌದು. 60 ದಿನಗಳ ಕಾಲ ರಾತ್ರಿ ಹಗಲೂ ಸತತ ಕಾದಾಟದ ನಂತರ 572 ಭಾರತೀಯ ಯೋಧರು ದೇಶಕ್ಕಾಗಿ ಪ್ರಾಣ ತೆತ್ತಿದ್ದಕ್ಕೆ 1999ರ ಜುಲೈ 26ರಂದು ವಿಜಯ ಸಿಕ್ಕಿತು. ಸಿಪಾಯಿಗಳ ಗೌರವಾರ್ಥವಾಗಿ ಅಂದಿನಿಂದ ಈ ದಿನವನ್ನು ದೇಶದಾದ್ಯಂತ `ಕಾರ್ಗಿಲ್ ವಿಜಯ ದಿವಸ’ ಎಂದು ಆಚರಿಸಲಾಗುತ್ತದೆ..

ಕಾಲಮಿತಿ
ಯುದ್ಧ ನಡೆದ ಒಟ್ಟು ಅವಧಿ : 74 ದಿನಗಳು
ಯುದ್ಧಕ್ಷೇತ್ರದ ಒಟ್ಟು ಅವಧಿ : 150 ಕಿ.ಮೀ.

ಬಳಸಿದ ಬಲಾಬಲ
ಭಾರತೀಯ ಸೇನೆ : 20,000
ಪಾಕಿಸ್ತಾನಿ ಸೇನೆ : ಅಘೋಷಿತ
ಅತಿಕ್ರಮಣಕಾರಿಗಳು : 1,500

ಮಡಿದವರು
ಭಾರತಸೇನೆ : 407
ಗಾಯಗೊಂಡವರು : 584
ನಾಪತ್ತೆಯಾದವರು : 6
ಪಾಕ್ ಸೇನೆ ಮಡಿದವರು : 696

ಕಾರ್ಗಿಲ್ ಕದನದಲ್ಲಿ ಹುತಾತ್ಮರಾದ ಕನ್ನಡದ ಕೆಲವರು ಕಡುಗಲಿಗಳ ಕುರಿತು ಮಾಹಿತಿ..

* ಭಾರತೀಯ ವಾಯುಪಡೆಯ ಪ್ಲೈಟ್ ಲೆಫ್ಟಿನೆಂಟ್ ಎಂ.ಸುಬ್ರಹ್ಮಣ್ಯಂ (ಬೆಳಗಾವಿ)

* ಮಡಿವಾಳಪ್ಪ ನಾಯ್ಕರ್ (ಆಸುಂಡಿ ಗ್ರಾಮ, ಸವದತ್ತಿ ತಾಲೂಕು, ಬೆಳಗಾವಿ)

* ಸಿಪಾಯಿ ಧೋಂಡಿಬಾ ದೇಸಾಯಿ (ವಡಗಾಂವ, ಖಾನಾಪುರ, ತಾಲೂಕು, ಬೆಳಗಾವಿ)

ಸಿದ್ಧನಗೌಡ ಬಸನಗೌಡ ಪಾಟೀಲ, ಸಿ.ಆರ್.ಪಿ.ಎಫ್. (ಕೆರೂರು ಗ್ರಾಮ, ಚಿಕ್ಕೋಡಿ ತಾಲೂಕು, ಬೆಳಗಾವಿ ಜಿಲ್ಲೆ)

* ಅಪ್ಪಾಸಾಹೇಬ ಪೀರಪ್ಪ ಧನವಾಡೆ, ಸಿ.ಆರ್.ಪಿ.ಎಫ್. (ಇಂಗಳಿ ಗ್ರಾಮ, ಚಿಕ್ಕೋಡಿ ತಾಲೂಕು, ಬೆಳಗಾವಿ)

* ನಾಯಕ ಶಿವಬಸಯ್ಯ ಕುಲಕರ್ಣಿ, 20ನೆಯ ರಾಷ್ಟ್ರೀಯ ರೈಫಲ್ಸ್ (ಚೊಳಚಗುಡ್ಡ ಗ್ರಾಮ, ಬಾದಾಮಿ, ಬಾಗಲಕೋಟ ಜಿಲ್ಲೆ)

* ಸಿದ್ಧರಾಮಪ್ಪ (ರೇಕುಳಿ ಗ್ರಾಮ, ಬೀದರ್ ಜಿಲ್ಲೆ)

* ಲ್ಯಾನ್ಸ್ ಹವಿಲ್ದಾರ್ ಮಲ್ಲಯ್ಯ ಚನ್ನಬಸಯ್ಯ ಮೇಗಳಮಠ (ಅಳವಂಡಿ ಗ್ರಾಮ, ಕೊಪ್ಪಳ ತಾಲ್ಲೂಕು, ಕೊಪ್ಪಳ ಜಿಲ್ಲೆ)

* ಎಸ್.ಕೆ.ಮೇದಪ್ಪ, ಮರಾಠಾ ಲೈಟ್ ಇನ್‍ಫೆಂಟ್ರಿ (ಕಿರಂಗನದೂರು, ಸೋಮವಾರಪೇಟೆ ತಾಲೂಕು, ಕೊಡಗು ಜಿಲ್ಲೆ)

* ದಾವಲಸಾಬ್ ಅಲಿಸಾಬ್ ಕಂಬಾರ್, ಬಿ.ಎಸ್.ಎಫ್. (ಬಲವಟ್ ಗ್ರಾಮ, ಮುದ್ದೇಬಿಹಾಳ ತಾಲೂಕು, ಬಿಜಾಪುರ)

* ಸುಬೇದಾರ್ ಪೆಮ್ಮಂಡ ದೇವಯ್ಯ ಕಾವೇರಪ್ಪ (ವಿರಾಜಪೇಟೆ, ಕೊಡಗು ಜಿಲ್ಲೆ)

* ಲಾನ್ಸ್ ನಾಯಕ್ ಎಚ್.ವಿ.ವೆಂಕಟ್ (ಅಗ್ರಹಾರ ಗ್ರಾಮ, ಅರಕಲಗೂಡು ತಾಲೂಕು, ಹಾಸನ ಜಿಲ್ಲೆ)

* ಲಾನ್ಸ್ ನಾಯಕ್ ಯಶವಂತ ಕೋಲಕಾರ (ಮೇಕಲಮರಡಿ ಗ್ರಾಮ, ಬೈಲಹೊಂಗಲ ತಾಲೂಕು, ಬೆಳಗಾವಿ ಜಿಲ್ಲೆ)

* ದಿಲೀಪ ಪೀರಪ್ಪ ಪೋತ್ರಾಜ (ಗದ್ಯಾಳ ಗ್ರಾಮ, ಜಮಖಂಡಿ ತಾಲೂಕು, ಬಿಜಾಪುರ ಜಿಲ್ಲೆ)

* ಗೋವಿಂದ ಶೆಡೋಳೆ (ವರದಟ್ಟಿ ಗ್ರಾಮ, ಭಾಲ್ಕಿ ತಾಲೂಕು, ಬೀದರ ಜಿಲ್ಲೆ)

ಬನ್ನಿ ಕಾರ್ಗಿಲ್ ವಿಜಯದ ಭಾಗವಾದ ಕನ್ನಡಿಗರಿಗೆ ನಮಿಸೋಣ ..

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

7 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

10 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

10 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

11 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

11 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

11 hours ago