Featured

ಅಮೋಘ ವಿಜಯದ ಈ ದಿನ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ವಿಶೇಷ ಲೇಖನ

ಕಾರ್ಗಿಲ್ ಯುದ್ಧವಾಗಿ ಇಂದಿಗೆ 19 ವರ್ಷಗಳೇ ಕಳೆದಿವೆ. ಎಂದೂ ಮರೆಯದ ಅಮೋಘ ವಿಜಯದ ಮೆಲುಕು ಹಾಕೋಣ.. ಆ ಹುತಾತ್ಮ ಯೋಧರಿಗೆ ನಮಿಸೋಣ…

ಕಾಶ್ಮೀರದ ಶ್ರೀನಗರದಿಂದ 205ಕಿ.ಮೀ.ಗಳ ದೂರದಲ್ಲಿರುವ ಕಾರ್ಗಿಲ್ ಕಠಿಣವಾದ ನೀರ್ಗಲ್ಲುಗಳಿಂದ ಆವೃತವಾದ, ಪ್ರಪಂಚದ ಕೆಲವು ಅತ್ಯಂತ ಎತ್ತರದ ಪರ್ವತಗಳಿಂದ ಕೂಡಿದ ಲಡಾಖ್ ಶ್ರೇಣಿಗೆ ಸೇರಿದ ಪ್ರದೇಶ. ಶ್ರೀನಗರ ಮತ್ತು ಲೇಹ್ ಪ್ರದೇಶಕ್ಕೆ ಇರುವ ಏಕೈಕ ಭೂಮಾರ್ಗ. ಅತ್ಯಂತ ಕ್ಲಿಷ್ಟ ಮತ್ತು ದುರ್ಗಮವಾದ ಭೂ ಸರಹದ್ದು. ವರ್ಷದ ಮುಕ್ಕಾಲು ಅವಧಿಯಲ್ಲಿ 48 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಶೀತಲ ಮರಭೂಮಿ. 160ಕಿ.ಮೀ.ಗಳ ಹಿಮಚ್ಛಾದಿತ ಪರ್ವತ ಹೊಂದಿರುವ ಊಹಾತೀತ ಸ್ಥಳ.

ಕಾಶ್ಮೀರವನ್ನು ತನ್ನದಾಗಿಸಿಕೊಳ್ಳಬೇಕು. ಸಿಯಾಚಿನ್ ನೀರ್ಗಲ್ಲಿನ ಮೇಲೆ ಸಂಪೂರ್ಣ ಒಡೆತನ ಹೊಂದಬೇಕೆಂಬ ದುರಾಸೆಗೆ ಮತ್ತು ಅಂತಾರಾಷ್ಟ್ರೀಯ ಗಮನ ತನ್ನತ್ತ ಸೆಳೆದುಕೊಳ್ಳಲು ಪಾಕ್ ಈ ಪ್ರದೇಶಕ್ಕೆ ತನ್ನ ಸೇನೆ ನುಗ್ಗಿಸಿತ್ತು. ಈ ಆಕ್ರಮಣಕ್ಕೆ ಪಾಕಿಸ್ತಾನಕ್ಕೀ ಸೇನೆ ಕೊಟ್ಟ ಹೆಸರು `ಆಪರೇಷನ್ ಬದ್ರ್’.

ಭಾರತೀಯ ಭೂಸೇನೆ ಮತ್ತು ವಾಯುಸೇನಾ ಪಡೆಗಳು ಜಂಟಿಯಾಗಿ ಮೇ ಮತ್ತು ಜುಲೈ 1999ರಲ್ಲಿ ಜಯಿಸಿದ್ದು ಕಾರ್ಗಿಲ್ ಕದನ. ಈ ಕ್ರಿಯೆಗೆ ಕೊಟ್ಟ ನಾಮಧೇಯ `ಆಪರೇಶನ್ ವಿಜಯ್’. ಭಾರತೀಯ ಸೇನಾ ಇತಿಹಾಸದಲ್ಲೇ ಅತ್ಯಂತ ಮಹತ್ತರವಾದ ವಿಜಯವದು. ಸಮುದ್ರಮಟ್ಟದಿಂದ ಅತೀ ಎತ್ತರ ಪ್ರದೇಶದಲ್ಲಿ ನಡೆದ ಮೊದಲ ಯುದ್ಧವೂ ಹೌದು. 60 ದಿನಗಳ ಕಾಲ ರಾತ್ರಿ ಹಗಲೂ ಸತತ ಕಾದಾಟದ ನಂತರ 572 ಭಾರತೀಯ ಯೋಧರು ದೇಶಕ್ಕಾಗಿ ಪ್ರಾಣ ತೆತ್ತಿದ್ದಕ್ಕೆ 1999ರ ಜುಲೈ 26ರಂದು ವಿಜಯ ಸಿಕ್ಕಿತು. ಸಿಪಾಯಿಗಳ ಗೌರವಾರ್ಥವಾಗಿ ಅಂದಿನಿಂದ ಈ ದಿನವನ್ನು ದೇಶದಾದ್ಯಂತ `ಕಾರ್ಗಿಲ್ ವಿಜಯ ದಿವಸ’ ಎಂದು ಆಚರಿಸಲಾಗುತ್ತದೆ..

ಕಾಲಮಿತಿ
ಯುದ್ಧ ನಡೆದ ಒಟ್ಟು ಅವಧಿ : 74 ದಿನಗಳು
ಯುದ್ಧಕ್ಷೇತ್ರದ ಒಟ್ಟು ಅವಧಿ : 150 ಕಿ.ಮೀ.

ಬಳಸಿದ ಬಲಾಬಲ
ಭಾರತೀಯ ಸೇನೆ : 20,000
ಪಾಕಿಸ್ತಾನಿ ಸೇನೆ : ಅಘೋಷಿತ
ಅತಿಕ್ರಮಣಕಾರಿಗಳು : 1,500

ಮಡಿದವರು
ಭಾರತಸೇನೆ : 407
ಗಾಯಗೊಂಡವರು : 584
ನಾಪತ್ತೆಯಾದವರು : 6
ಪಾಕ್ ಸೇನೆ ಮಡಿದವರು : 696

ಕಾರ್ಗಿಲ್ ಕದನದಲ್ಲಿ ಹುತಾತ್ಮರಾದ ಕನ್ನಡದ ಕೆಲವರು ಕಡುಗಲಿಗಳ ಕುರಿತು ಮಾಹಿತಿ..

* ಭಾರತೀಯ ವಾಯುಪಡೆಯ ಪ್ಲೈಟ್ ಲೆಫ್ಟಿನೆಂಟ್ ಎಂ.ಸುಬ್ರಹ್ಮಣ್ಯಂ (ಬೆಳಗಾವಿ)

* ಮಡಿವಾಳಪ್ಪ ನಾಯ್ಕರ್ (ಆಸುಂಡಿ ಗ್ರಾಮ, ಸವದತ್ತಿ ತಾಲೂಕು, ಬೆಳಗಾವಿ)

* ಸಿಪಾಯಿ ಧೋಂಡಿಬಾ ದೇಸಾಯಿ (ವಡಗಾಂವ, ಖಾನಾಪುರ, ತಾಲೂಕು, ಬೆಳಗಾವಿ)

ಸಿದ್ಧನಗೌಡ ಬಸನಗೌಡ ಪಾಟೀಲ, ಸಿ.ಆರ್.ಪಿ.ಎಫ್. (ಕೆರೂರು ಗ್ರಾಮ, ಚಿಕ್ಕೋಡಿ ತಾಲೂಕು, ಬೆಳಗಾವಿ ಜಿಲ್ಲೆ)

* ಅಪ್ಪಾಸಾಹೇಬ ಪೀರಪ್ಪ ಧನವಾಡೆ, ಸಿ.ಆರ್.ಪಿ.ಎಫ್. (ಇಂಗಳಿ ಗ್ರಾಮ, ಚಿಕ್ಕೋಡಿ ತಾಲೂಕು, ಬೆಳಗಾವಿ)

* ನಾಯಕ ಶಿವಬಸಯ್ಯ ಕುಲಕರ್ಣಿ, 20ನೆಯ ರಾಷ್ಟ್ರೀಯ ರೈಫಲ್ಸ್ (ಚೊಳಚಗುಡ್ಡ ಗ್ರಾಮ, ಬಾದಾಮಿ, ಬಾಗಲಕೋಟ ಜಿಲ್ಲೆ)

* ಸಿದ್ಧರಾಮಪ್ಪ (ರೇಕುಳಿ ಗ್ರಾಮ, ಬೀದರ್ ಜಿಲ್ಲೆ)

* ಲ್ಯಾನ್ಸ್ ಹವಿಲ್ದಾರ್ ಮಲ್ಲಯ್ಯ ಚನ್ನಬಸಯ್ಯ ಮೇಗಳಮಠ (ಅಳವಂಡಿ ಗ್ರಾಮ, ಕೊಪ್ಪಳ ತಾಲ್ಲೂಕು, ಕೊಪ್ಪಳ ಜಿಲ್ಲೆ)

* ಎಸ್.ಕೆ.ಮೇದಪ್ಪ, ಮರಾಠಾ ಲೈಟ್ ಇನ್‍ಫೆಂಟ್ರಿ (ಕಿರಂಗನದೂರು, ಸೋಮವಾರಪೇಟೆ ತಾಲೂಕು, ಕೊಡಗು ಜಿಲ್ಲೆ)

* ದಾವಲಸಾಬ್ ಅಲಿಸಾಬ್ ಕಂಬಾರ್, ಬಿ.ಎಸ್.ಎಫ್. (ಬಲವಟ್ ಗ್ರಾಮ, ಮುದ್ದೇಬಿಹಾಳ ತಾಲೂಕು, ಬಿಜಾಪುರ)

* ಸುಬೇದಾರ್ ಪೆಮ್ಮಂಡ ದೇವಯ್ಯ ಕಾವೇರಪ್ಪ (ವಿರಾಜಪೇಟೆ, ಕೊಡಗು ಜಿಲ್ಲೆ)

* ಲಾನ್ಸ್ ನಾಯಕ್ ಎಚ್.ವಿ.ವೆಂಕಟ್ (ಅಗ್ರಹಾರ ಗ್ರಾಮ, ಅರಕಲಗೂಡು ತಾಲೂಕು, ಹಾಸನ ಜಿಲ್ಲೆ)

* ಲಾನ್ಸ್ ನಾಯಕ್ ಯಶವಂತ ಕೋಲಕಾರ (ಮೇಕಲಮರಡಿ ಗ್ರಾಮ, ಬೈಲಹೊಂಗಲ ತಾಲೂಕು, ಬೆಳಗಾವಿ ಜಿಲ್ಲೆ)

* ದಿಲೀಪ ಪೀರಪ್ಪ ಪೋತ್ರಾಜ (ಗದ್ಯಾಳ ಗ್ರಾಮ, ಜಮಖಂಡಿ ತಾಲೂಕು, ಬಿಜಾಪುರ ಜಿಲ್ಲೆ)

* ಗೋವಿಂದ ಶೆಡೋಳೆ (ವರದಟ್ಟಿ ಗ್ರಾಮ, ಭಾಲ್ಕಿ ತಾಲೂಕು, ಬೀದರ ಜಿಲ್ಲೆ)

ಬನ್ನಿ ಕಾರ್ಗಿಲ್ ವಿಜಯದ ಭಾಗವಾದ ಕನ್ನಡಿಗರಿಗೆ ನಮಿಸೋಣ ..

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago