Featured

ಅಮ್ಮ ಮತ್ತು ಅಜ್ಜಿಯ ಗುಣಗಳು ಇರಬೇಕು -ತಮ್ಮ ಬಾಳ ಸಂಗಾತಿ ಕುರಿತು ಮಾತನಾಡಿದ ರಾಹುಲ್ ಗಾಂಧಿ – Vishwanews24

ಅಮ್ಮ ಮತ್ತು ಅಜ್ಜಿಯ ಗುಣಗಳು ಇರಬೇಕು -ತಮ್ಮ ಬಾಳ ಸಂಗಾತಿ ಕುರಿತು ಮಾತನಾಡಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಜೀವನ ಸಂಗಾತಿ ಹೇಗಿರಬೇಕೆಂಬುದರ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ಲೈಫ್ ಪಾರ್ಟ್ನರ್ ಕುರಿತು ಕೇಳಿದ ಪ್ರಶ್ನೆಗೆ ರಾಹುಲ್ ಪ್ರತಿಕ್ರಿಯೆ ನೀಡಿದ್ದು, ನನ್ನ ಪತ್ನಿಯಾಗುವವಳಲ್ಲಿ ನನ್ನ ತಾಯಿ ಸೋನಿಯಾ ಗಾಂಧಿ ಮತ್ತು ಅಜ್ಜಿ ಇಂದಿರಾ ಗಾಂಧಿ ಅವರ ಗುಣಗಳು ಇರಬೇಕು. ಅಮ್ಮ ಮತ್ತು ಅಜ್ಜಿಯ ವ್ಯಕ್ತಿತ್ವದ ಗುಣಗಳನ್ನು ಹೊಂದಿರುವವಳ ಜೊತೆ ನಾನು ಜೀವನವನ್ನು ಹಂಚಿಕೊಳ್ಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ತಮ್ಮ ರಾಷ್ಟ್ರವ್ಯಾಪಿ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇಂದಿರಾ ಗಾಂಧಿಯಂತಹ ಮಹಿಳೆಯೊಂದಿಗೆ ಜೀವನ ಹಂಚಿಕೊಳ್ಳಲು ಬಯಸುತ್ತೀರಾ? ಎಂದು ನಿರೂಪಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಮಾಜಿ ಪ್ರಧಾನಿ ಹಾಗೂ ನನ್ನ ಅಜ್ಜಿ ಇಂದಿರಾ ಗಾಂಧಿ ನನ್ನ ಜೀವನದ ಪ್ರೀತಿ ಮತ್ತು ನನ್ನ ಎರಡನೇ ತಾಯಿ ಎಂದು ಹೇಳಿದ್ದಾರೆ. ನನಗೆ ಮದುವೆಯಾಗಬಾರದು ಎಂದೇನಿಲ್ಲ. ಆಕೆ ನನ್ನ ತಾಯಿ ಮತ್ತು ಅಜ್ಜಿಯ ಗುಣಗಳನ್ನು ಹೊಂದಿದ್ದರೆ ನನಗೆ ಇಷ್ಟವಾಗುತ್ತಾಳೆ. ಅಂತಹ ಮಹಿಳೆಯನ್ನು ನನ್ನ ಜೀವನ ಸಂಗಾತಿಯನ್ನಾಗಿ ಸ್ವೀಕರಿಸಲು ನಾನು ಬಯಸುತ್ತೇನೆ ಎಂದಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

6 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

7 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

7 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

7 hours ago