Featured

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ : ಭಕ್ತರಿಂದ ಮೂರೇ ದಿನಗಳಲ್ಲಿ 100 ಕೋಟಿ ಹಣ ಸಂಗ್ರಹ -Vishwanews24

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ : ಭಕ್ತರಿಂದ ಮೂರೇ ದಿನಗಳಲ್ಲಿ 100 ಕೋಟಿ ಹಣ ಸಂಗ್ರಹ -Vishwanews24

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಭವ್ಯ ರಾಮಮಂದಿರಕ್ಕೆ ಭಕ್ತರಿಂದ ಭರ್ಜರಿಯಾಗಿ ದೇಣಿಗೆ ಹರಿದು ಬರಲಾರಂಭಿಸಿದೆ. ದೇಣಿಗೆ ಸಂಗ್ರಹ ಆರಂಭವಾದ ಮೂರೇ ದಿನಗಳಲ್ಲಿ ಅಂದಾಜು 100 ಕೋಟಿ ರು. ಹಣ ಸಂಗ್ರಹವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ತಿಳಿಸಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿರುವ ರಾಯ್‌ ‘ದೇಶದ ವಿವಿಧೆಡೆ ಸಂಗ್ರಹವಾದ ಹಣ ಇನ್ನೂ ಪೂರ್ಣ ಪ್ರಮಾಣದಲ್ಲಿ ಟ್ರಸ್ಟ್‌ನ ಕೇಂದ್ರ ಕಚೇರಿ ತಲುಪಿಲ್ಲ. ಆದರೆ ನಮ್ಮ ಕಾರ್ಯಕರ್ತರು ನೀಡಿರುವ ಮಾಹಿತಿ ಅನ್ವಯ ಈವರೆಗೆ 100 ಕೋಟಿ ರು. ಆಸುಪಾಸಿನಷ್ಟುಹಣ ಸಂಗ್ರಹವಾಗಿದೆ’ ಎಂದಿದ್ದಾರೆ.

ಸಂಪೂರ್ಣವಾಗಿ ಭಕ್ತರ ದೇಣಿಗೆ ಹಣದಿಂದಲೇ ರಾಮಮಂದಿರ ದೇಗುಲ ಮತ್ತು ದೇಗುಲ ಸಂಕೀರ್ಣವನ್ನು ನಿರ್ಮಿಸುವ ಉದ್ದೇಶವನ್ನು ಟ್ರಸ್ಟ್‌ ಹೊಂದಿದೆ. ಇದಕ್ಕಾಗಿ ಸಂಕ್ರಾತಿ ದಿನವಾದ ಜ.14ರಿಂದ ಫೆ.27ರವರೆಗೆ ದೇಶವ್ಯಾಪಿ ದೇಣಿಗೆ ಸಂಗ್ರಹದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಮಮಂದಿರಕ್ಕೆ 300-400 ಕೋಟಿ ರು. ಮತ್ತು ಒಟ್ಟಾರೆ ರಾಮಮಂದಿರ ಸಂಕೀರ್ಣಕ್ಕೆ 1100 ಕೋಟಿ ರು. ವೆಚ್ಚವಾಗುವ ಸಾಧ್ಯತೆ ಇದೆ ಎಂದು ಟ್ರಸ್ಟ್‌ ಅಂದಾಜಿಸಿದೆ.

ಈಗಾಗಲೇ ರಾಷ್ಟ್ರಪತಿ ರಾಮನಾಥ್​​ ಕೋವಿಂದ್ 5 ಲಕ್ಷ ರೂ, ಪೇಜಾವರ ಸ್ವಾಮೀಜಿ, ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥಸ್ವಾಮೀಜಿ, ಧರ್ಮಸ್ಥಳ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ, ಶೃಂಗೇರಿ ಸ್ವಾಮೀಜಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ರಾಮಮಂದಿರಕ್ಕೆ ದೇಣಿಗೆ ಸಮರ್ಪಣೆ ಮಾಡಿದ್ದಾರೆ. ಇದಲ್ಲದೇ ಬಿಜೆಪಿ, ಹಿಂದೂ ಸಂಘಟನೆಗಳು ಕೂಡಾ ಸಾರ್ವಜನಿಕರಿಂದ ನಿಧಿ ಸಂಗ್ರಹಿಸಿ ರಾಮಮಂದಿರ ನಿರ್ಮಾಣ ಟ್ರಸ್ಟ್​ಗೆ ಸಲ್ಲಿಕೆ ಮಾಡುತ್ತಿವೆ.

ಗಣರಾಜ್ಯೋತ್ಸವದಂದು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಚಾಲನೆ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago