Featured

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ : ಭಕ್ತರಿಂದ ಮೂರೇ ದಿನಗಳಲ್ಲಿ 100 ಕೋಟಿ ಹಣ ಸಂಗ್ರಹ -Vishwanews24

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ : ಭಕ್ತರಿಂದ ಮೂರೇ ದಿನಗಳಲ್ಲಿ 100 ಕೋಟಿ ಹಣ ಸಂಗ್ರಹ -Vishwanews24

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಭವ್ಯ ರಾಮಮಂದಿರಕ್ಕೆ ಭಕ್ತರಿಂದ ಭರ್ಜರಿಯಾಗಿ ದೇಣಿಗೆ ಹರಿದು ಬರಲಾರಂಭಿಸಿದೆ. ದೇಣಿಗೆ ಸಂಗ್ರಹ ಆರಂಭವಾದ ಮೂರೇ ದಿನಗಳಲ್ಲಿ ಅಂದಾಜು 100 ಕೋಟಿ ರು. ಹಣ ಸಂಗ್ರಹವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ತಿಳಿಸಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿರುವ ರಾಯ್‌ ‘ದೇಶದ ವಿವಿಧೆಡೆ ಸಂಗ್ರಹವಾದ ಹಣ ಇನ್ನೂ ಪೂರ್ಣ ಪ್ರಮಾಣದಲ್ಲಿ ಟ್ರಸ್ಟ್‌ನ ಕೇಂದ್ರ ಕಚೇರಿ ತಲುಪಿಲ್ಲ. ಆದರೆ ನಮ್ಮ ಕಾರ್ಯಕರ್ತರು ನೀಡಿರುವ ಮಾಹಿತಿ ಅನ್ವಯ ಈವರೆಗೆ 100 ಕೋಟಿ ರು. ಆಸುಪಾಸಿನಷ್ಟುಹಣ ಸಂಗ್ರಹವಾಗಿದೆ’ ಎಂದಿದ್ದಾರೆ.

ಸಂಪೂರ್ಣವಾಗಿ ಭಕ್ತರ ದೇಣಿಗೆ ಹಣದಿಂದಲೇ ರಾಮಮಂದಿರ ದೇಗುಲ ಮತ್ತು ದೇಗುಲ ಸಂಕೀರ್ಣವನ್ನು ನಿರ್ಮಿಸುವ ಉದ್ದೇಶವನ್ನು ಟ್ರಸ್ಟ್‌ ಹೊಂದಿದೆ. ಇದಕ್ಕಾಗಿ ಸಂಕ್ರಾತಿ ದಿನವಾದ ಜ.14ರಿಂದ ಫೆ.27ರವರೆಗೆ ದೇಶವ್ಯಾಪಿ ದೇಣಿಗೆ ಸಂಗ್ರಹದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಮಮಂದಿರಕ್ಕೆ 300-400 ಕೋಟಿ ರು. ಮತ್ತು ಒಟ್ಟಾರೆ ರಾಮಮಂದಿರ ಸಂಕೀರ್ಣಕ್ಕೆ 1100 ಕೋಟಿ ರು. ವೆಚ್ಚವಾಗುವ ಸಾಧ್ಯತೆ ಇದೆ ಎಂದು ಟ್ರಸ್ಟ್‌ ಅಂದಾಜಿಸಿದೆ.

ಈಗಾಗಲೇ ರಾಷ್ಟ್ರಪತಿ ರಾಮನಾಥ್​​ ಕೋವಿಂದ್ 5 ಲಕ್ಷ ರೂ, ಪೇಜಾವರ ಸ್ವಾಮೀಜಿ, ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥಸ್ವಾಮೀಜಿ, ಧರ್ಮಸ್ಥಳ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ, ಶೃಂಗೇರಿ ಸ್ವಾಮೀಜಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ರಾಮಮಂದಿರಕ್ಕೆ ದೇಣಿಗೆ ಸಮರ್ಪಣೆ ಮಾಡಿದ್ದಾರೆ. ಇದಲ್ಲದೇ ಬಿಜೆಪಿ, ಹಿಂದೂ ಸಂಘಟನೆಗಳು ಕೂಡಾ ಸಾರ್ವಜನಿಕರಿಂದ ನಿಧಿ ಸಂಗ್ರಹಿಸಿ ರಾಮಮಂದಿರ ನಿರ್ಮಾಣ ಟ್ರಸ್ಟ್​ಗೆ ಸಲ್ಲಿಕೆ ಮಾಡುತ್ತಿವೆ.

ಗಣರಾಜ್ಯೋತ್ಸವದಂದು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಚಾಲನೆ -Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago