Featured

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ : ಭಕ್ತರಿಂದ ಮೂರೇ ದಿನಗಳಲ್ಲಿ 100 ಕೋಟಿ ಹಣ ಸಂಗ್ರಹ -Vishwanews24

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ : ಭಕ್ತರಿಂದ ಮೂರೇ ದಿನಗಳಲ್ಲಿ 100 ಕೋಟಿ ಹಣ ಸಂಗ್ರಹ -Vishwanews24

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಭವ್ಯ ರಾಮಮಂದಿರಕ್ಕೆ ಭಕ್ತರಿಂದ ಭರ್ಜರಿಯಾಗಿ ದೇಣಿಗೆ ಹರಿದು ಬರಲಾರಂಭಿಸಿದೆ. ದೇಣಿಗೆ ಸಂಗ್ರಹ ಆರಂಭವಾದ ಮೂರೇ ದಿನಗಳಲ್ಲಿ ಅಂದಾಜು 100 ಕೋಟಿ ರು. ಹಣ ಸಂಗ್ರಹವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ತಿಳಿಸಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿರುವ ರಾಯ್‌ ‘ದೇಶದ ವಿವಿಧೆಡೆ ಸಂಗ್ರಹವಾದ ಹಣ ಇನ್ನೂ ಪೂರ್ಣ ಪ್ರಮಾಣದಲ್ಲಿ ಟ್ರಸ್ಟ್‌ನ ಕೇಂದ್ರ ಕಚೇರಿ ತಲುಪಿಲ್ಲ. ಆದರೆ ನಮ್ಮ ಕಾರ್ಯಕರ್ತರು ನೀಡಿರುವ ಮಾಹಿತಿ ಅನ್ವಯ ಈವರೆಗೆ 100 ಕೋಟಿ ರು. ಆಸುಪಾಸಿನಷ್ಟುಹಣ ಸಂಗ್ರಹವಾಗಿದೆ’ ಎಂದಿದ್ದಾರೆ.

ಸಂಪೂರ್ಣವಾಗಿ ಭಕ್ತರ ದೇಣಿಗೆ ಹಣದಿಂದಲೇ ರಾಮಮಂದಿರ ದೇಗುಲ ಮತ್ತು ದೇಗುಲ ಸಂಕೀರ್ಣವನ್ನು ನಿರ್ಮಿಸುವ ಉದ್ದೇಶವನ್ನು ಟ್ರಸ್ಟ್‌ ಹೊಂದಿದೆ. ಇದಕ್ಕಾಗಿ ಸಂಕ್ರಾತಿ ದಿನವಾದ ಜ.14ರಿಂದ ಫೆ.27ರವರೆಗೆ ದೇಶವ್ಯಾಪಿ ದೇಣಿಗೆ ಸಂಗ್ರಹದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಮಮಂದಿರಕ್ಕೆ 300-400 ಕೋಟಿ ರು. ಮತ್ತು ಒಟ್ಟಾರೆ ರಾಮಮಂದಿರ ಸಂಕೀರ್ಣಕ್ಕೆ 1100 ಕೋಟಿ ರು. ವೆಚ್ಚವಾಗುವ ಸಾಧ್ಯತೆ ಇದೆ ಎಂದು ಟ್ರಸ್ಟ್‌ ಅಂದಾಜಿಸಿದೆ.

ಈಗಾಗಲೇ ರಾಷ್ಟ್ರಪತಿ ರಾಮನಾಥ್​​ ಕೋವಿಂದ್ 5 ಲಕ್ಷ ರೂ, ಪೇಜಾವರ ಸ್ವಾಮೀಜಿ, ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥಸ್ವಾಮೀಜಿ, ಧರ್ಮಸ್ಥಳ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ, ಶೃಂಗೇರಿ ಸ್ವಾಮೀಜಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ರಾಮಮಂದಿರಕ್ಕೆ ದೇಣಿಗೆ ಸಮರ್ಪಣೆ ಮಾಡಿದ್ದಾರೆ. ಇದಲ್ಲದೇ ಬಿಜೆಪಿ, ಹಿಂದೂ ಸಂಘಟನೆಗಳು ಕೂಡಾ ಸಾರ್ವಜನಿಕರಿಂದ ನಿಧಿ ಸಂಗ್ರಹಿಸಿ ರಾಮಮಂದಿರ ನಿರ್ಮಾಣ ಟ್ರಸ್ಟ್​ಗೆ ಸಲ್ಲಿಕೆ ಮಾಡುತ್ತಿವೆ.

ಗಣರಾಜ್ಯೋತ್ಸವದಂದು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಚಾಲನೆ -Vishwanews24

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

2 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

8 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

8 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

9 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

9 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago