ಗಣರಾಜ್ಯೋತ್ಸವದಂದು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಚಾಲನೆ -Vishwanews24

Featured, ರಾಷ್ಟ್ರ ನ್ಯೂಸ್

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ: ಗಣರಾಜ್ಯೋತ್ಸವದಂದು ಚಾಲನೆ -Vishwanews24

ಲಕ್ನೋ :ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ದೇಶಾದ್ಯಂತ ದೇಣಿಗೆ ಸಂಗ್ರಹ ಅಭಿಯಾನ ಶುರುವಾಗಿರುವ ಬೆನ್ನಲ್ಲೇ, ಅಯೋಧ್ಯೆಯ ಪ್ರತ್ಯೇಕ ಸ್ಥಳದಲ್ಲಿ ನಿರ್ಮಾಣವಾಗಲಿರುವ ಮಸೀದಿ ಕಾಮಗಾರಿ ಗಣರಾಜ್ಯೋತ್ಸವದ ದಿನವಾದ ಜನವರಿ 26ರಂದು ತ್ರಿವರ್ಣ ಧ್ವಜ ಹಾರಿಸಿ ಮತ್ತು ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಲು ನಿರ್ಧರಿಸಲಾಗಿದೆ.

ರಾಮ್ ಮಂದಿರ ನಿರ್ಮಿಸುವ ಸ್ಥಳದಿಂದ 25 ಕಿ.ಮೀ ದೂರದಲ್ಲಿರುವ ಐದು ಎಕರೆ ಜಾಗದಲ್ಲಿ ಮಸೀದಿಯನ್ನು ನಿರ್ಮಿಸಲಿರುವ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಟ್ರಸ್ಟ್, ಯೋಜನೆಯ ಪ್ರಾರಂಭವನ್ನು ಗುರುತಿಸುವ ಸಮಾರಂಭ ಜನವರಿ 26 ಬೆಳಗ್ಗೆ 8: 30 ಕ್ಕೆ ನಡೆಯಲಿದೆ.

ಪ್ರತಿಷ್ಠಾನದ ಒಂಬತ್ತು ಟ್ರಸ್ಟಿಗಳು ಭಾನುವಾರ ಸಭೆ ನಡೆಸಿ, ಕಾರ್ಯಕ್ರಮ ಮತ್ತು ಆದಾಯ ತೆರಿಗೆ ಇಲಾಖೆಯಿಂದ ಅನುಮತಿ ಪಡೆಯಲು ವಿದೇಶಿ ಕೊಡುಗೆಗಳನ್ನು ಪಡೆಯುವಂತಹ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಯೋಜನೆಯು ಈ ಪ್ರದೇಶದ ಸಮುದಾಯಕ್ಕೆ ಸೇವೆ ಸಲ್ಲಿಸಲು ಉದ್ದೇಶಿಸಿದೆ. ಹವಾಮಾನ ವೈಪರೀತ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮಾನವೀಯತೆಗೆ ದೊಡ್ಡ ಸವಾಲಾಗಿದೆ ಎಂದು ಐಐಸಿಎಫ್ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದಿನಿಂದ ಸಂಪೂರ್ಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ; ಉಲ್ಲಂಘಿಸಿದ್ರೆ 7 ವರ್ಷ ಜೈಲು, 5 ಲಕ್ಷ ರೂ. ದಂಡ -Vishwanews24