ರಕ್ಷಿತ್ ಶೆಟ್ಟಿ ಇತ್ತೀಚೆಗೆ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಮಾಡಿದ್ದಾರೆ. ರಾಮನ ದರ್ಶನ ಮಾಡುವ ಸಮಯದಲ್ಲಿ ತಮಗಾದ ವಿಶೇಷ ಅನುಭೂತಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಪ್ರಾಣ ಪ್ರತಿಷ್ಠೆ ಆದಾಗಿನಿಂದಲೂ ರಾಮನನ್ನು ನೇರವಾಗಿ ನೋಡಲು ಕಾತರನಾಗಿದ್ದೆ. ಪ್ರಾಣ ಪ್ರತಿಷ್ಠೆಯ ದಿನದಿಂದಲೂ ರಾಮನ ಕಣ್ಣುಗಳು ನನ್ನನ್ನು ಬಹುವಾಗಿ ಸೆಳೆದಿದ್ದವು. ಆ ಕಣ್ಣುಗಳು ನಿಜವಾದ ಕಣ್ಣುಗಳೇ ಎಂದು ನನಗೆ ಪದೇ ಪದೇ ಅನ್ನಿಸಿತ್ತು. ಅದೆಷ್ಟೋ ಬಾರಿ ಚಿತ್ರಗಳನ್ನು ಜೂಮ್ ಮಾಡಿ ಮಾಡಿ ನೋಡಿದ್ದೆ. ‘ಇಂದು ನಾನು ಗಮನಿಸಿದಂತೆ ಕಣ್ಣುಗಳ ಆ ತೇಜತೆಯನ್ನು ಮೂರ್ತಿ ಸ್ವತಃ ತಾನೇ ಆವಾಹಿಸಿಕೊಂಡಿದೆಯೇನೋ ಎನ್ನಿಸಿತು. ಕಣ್ಣುಗಳಿಗೆ ಆ ತೇಜಸ್ಸು ಪ್ರಾಪ್ತವಾಗಲು ಕಣ್ಣಿನ ಬಿಳಿಯ ಭಾಗವನ್ನು ಭಿನ್ನವಾದ ಕುಸುರಿ ಕೆಲಸ ಮಾಡಲಾಗಿದೆ ಎಂದು ನಾನು ಅರಿತುಕೊಂಡೆ’
ಇಂದು ಕೊನೆಗೂ ನಾನು ಹತ್ತಿರದಿಂದ ರಾಮನ ಮೂರ್ತಿಯನ್ನು ಕಂಡೆ. ಬಹಳ ಕಡಿಮೆ ಮಂದಿಗೆ ಅಷ್ಟು ಹತ್ತಿರದಿಂದ ರಾಮನನ್ನು ಕಣ್ಣು ತುಂಬಿಸಿಕೊಳ್ಳುವ ಅದೃಷ್ಟ ಪ್ರಾಪ್ತವಾಗುತ್ತದೆ. ರಾಮನ ಮೂರ್ತಿಯ ಮುಂದೆ ಸುಮಾರು ಅರ್ಧ ತಾಸು ನಾನು ಕುಳಿತಿದ್ದೆ. ಹೀಗೆ ಇಷ್ಟು ಸಮಯ ನಾನು ಯಾವ ಮೂರ್ತಿಯ ಮುಂದೆಯೂ ಕೂತಿದ್ದಿಲ್ಲ. ಆದರೆ ಈ ಅನುಭವ ಭಿನ್ನವಾಗಿತ್ತು. ಸಾಮಾನ್ಯವಾಗಿ ಎಲ್ಲ ಮೂರ್ತಿ ಕೆತ್ತನೆಗಳನ್ನು ನಾನು ಶ್ಲಾಘಿಸುತ್ತೇನೆ. ಆದರೆ ಈ ಮೂರ್ತಿಯ ಕುಸುರಿ ಅದ್ಭುತ. ಇದು ಸಾಮಾನ್ಯವಲ್ಲ. ರಾಮನೆಂದರೆ ಹಾಗೆಯೇ ಎನಿಸುತ್ತದೆ ಎಂದು ಬರೆದಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…