Featured

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಚಿನ್ನದ ಇಟ್ಟಿಗೆ ನೀಡುವೆ : ಮೊಘಲ್ ವಂಶಸ್ಥ -Vishwanews24

ಹೈದರಾಬಾದ್ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಚಿನ್ನದ ಇಟ್ಟಿಗೆ ನೀಡುವುದಾಗಿ ಮೊಘಲ್ ಸಾಮ್ರಾಜ್ಯದ ಕೊನೆಯ ದೊರೆಯ ಆರನೇ ಪೀಳಿಗೆಯ ವಂಶಸ್ಥರೊಬ್ಬರು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರವಿದ್ದ ಜಾಗದಲ್ಲಿ ಮಸೀದಿ ನಿರ್ಮಿಸಿದ್ದು, ಮೊಘಲರ ಮೊದಲ ದೊರೆ ಬಾಬರ್, ಮೊಘಲ್ ಸಾಮ್ರಾಜ್ಯದ ಕೊನೆಯ ದೊರೆ ಬಹಾದ್ದೂರ್ ಷಾ ಜಾಫರ್. ಅವನ 6 ನೇ ಪೀಳಿಗೆಯ ವಂಶಸ್ಥರಾಗಿರುವ ಹಬೀಬುದ್ದೀನ್ ಟ್ಯೂಸಿ ಈಗ ಹೈದರಾಬಾದ್ ನಲ್ಲಿ ವಾಸವಾಗಿದ್ದಾರೆ.

ರಾಮ ಜನ್ಮಭೂಮಿ ಭೂ ವಿವಾದ ಆಲಿಸುತ್ತಿರುವ ಸುಪ್ರೀಂಕೋರ್ಟ್ ಪೀಠದ ಮುಂದೆ ಅರ್ಜಿ ಸಲ್ಲಿಸಿರುವ ಟ್ಯೂಸಿ ಈ ಕೊಡುಗೆ ಪ್ರಕಟಿಸಿದ್ದಾರೆ. ಟ್ಯೂಸಿ ಕಳೆದ ವರ್ಷದ ಸೆಪ್ಟೆಂಬರ್ ನಲ್ಲೂ ಇದೇ ರೀತಿ ಪ್ರಕಟಿಸಿದ್ದರು. ಈ ಬಾರಿ ಸುಪ್ರೀಂಕೋರ್ಟ್ ಮುಂದೆಯೇ ಅರ್ಜಿ ಸಲ್ಲಿಸಿದ್ದಾರೆ.

ಒಂದು ಸುಪ್ರೀಂಕೋರ್ಟ್ ನನಗೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಸ್ಥಳವನ್ನು ನನಗೆ ಹಸ್ತಾಂತರಿಸಿದರೆ. ರಾಮಮಂದಿರ ನಿರ್ಮಿಸಲು ನಾನು ಇಡೀ ಜಾಗವನ್ನು ದಾನವಾಗಿ ನೀಡುವುದಾಗಿ ಘೋಷಿಸಿದ್ದಾರೆ.

ವಿವಾದಿತ ಜಾಗಕ್ಕೆ ಸಂಬಂಧಿಸಿ ಯಾರಲ್ಲೂ ದಾಖಲೆಗಳಿಲ್ಲ. ಆದರೆ ತಾವು ಮೊಘಲ್‌ ವಂಶಸ್ಥನಾಗಿರುವುದರಿಂದ ಆ ಜಾಗದ ಮೇಲೆ ಹಕ್ಕಿದೆ. ಹೀಗಾಗಿ ಹೆಚ್ಚಿನ ಗೊಂದಲಕ್ಕೆ ಅವಕಾಶವಿಲ್ಲದಂತೆ ವಿವಾದಿತ ಜಾಗವನ್ನು ನಮ್ಮ ಹೆಸರಿಗೆ ಹಸ್ತಾಂತರಿಸಬೇಕು ಎನ್ನುವುದು ಟ್ಯೂಸಿ ವಾದ. ಹಾಗೆ ಸುಪ್ರೀಂಕೋರ್ಟ್‌ ತಮ್ಮ ಹೆಸರಿಗೆ ಜಾಗ ನೀಡಿದರೆ ಮಂದಿರ ಕಟ್ಟಲು ಜಾಗ ನೀಡುವುದಾಗಿ ಟ್ಯೂಸಿ ಹೇಳುತ್ತಾರೆ. ಬಾಬರಿ ಮಸೀದಿ ನಿರ್ಮಾಣವಾಗಿದ್ದು ಸೇನೆಯ ನಮಾಜ್‌ಗಾಗಿ ಮಾತ್ರ. ಅಲ್ಲಿ ಮೊದಲು ಏನಿತ್ತು ಎನ್ನುವ ವಿಚಾರಕ್ಕೆ ನಾನು ಹೋಗುವುದಿಲ್ಲ. ಒಬ್ಬ ನೈಜ ಮುಸ್ಲಿಮನಾಗಿ ಅವರ ಭಾವನೆಗಳನ್ನು ಗೌರವಿಸಿ ಜಾಗ ಬಿಟ್ಟುಕೊಡುತ್ತೇನೆ ಎನ್ನುತ್ತಾರೆ ಟ್ಯೂಸಿ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

13 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

13 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

13 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

14 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

14 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

14 hours ago