ಹೈದರಾಬಾದ್ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಚಿನ್ನದ ಇಟ್ಟಿಗೆ ನೀಡುವುದಾಗಿ ಮೊಘಲ್ ಸಾಮ್ರಾಜ್ಯದ ಕೊನೆಯ ದೊರೆಯ ಆರನೇ ಪೀಳಿಗೆಯ ವಂಶಸ್ಥರೊಬ್ಬರು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರವಿದ್ದ ಜಾಗದಲ್ಲಿ ಮಸೀದಿ ನಿರ್ಮಿಸಿದ್ದು, ಮೊಘಲರ ಮೊದಲ ದೊರೆ ಬಾಬರ್, ಮೊಘಲ್ ಸಾಮ್ರಾಜ್ಯದ ಕೊನೆಯ ದೊರೆ ಬಹಾದ್ದೂರ್ ಷಾ ಜಾಫರ್. ಅವನ 6 ನೇ ಪೀಳಿಗೆಯ ವಂಶಸ್ಥರಾಗಿರುವ ಹಬೀಬುದ್ದೀನ್ ಟ್ಯೂಸಿ ಈಗ ಹೈದರಾಬಾದ್ ನಲ್ಲಿ ವಾಸವಾಗಿದ್ದಾರೆ.
ರಾಮ ಜನ್ಮಭೂಮಿ ಭೂ ವಿವಾದ ಆಲಿಸುತ್ತಿರುವ ಸುಪ್ರೀಂಕೋರ್ಟ್ ಪೀಠದ ಮುಂದೆ ಅರ್ಜಿ ಸಲ್ಲಿಸಿರುವ ಟ್ಯೂಸಿ ಈ ಕೊಡುಗೆ ಪ್ರಕಟಿಸಿದ್ದಾರೆ. ಟ್ಯೂಸಿ ಕಳೆದ ವರ್ಷದ ಸೆಪ್ಟೆಂಬರ್ ನಲ್ಲೂ ಇದೇ ರೀತಿ ಪ್ರಕಟಿಸಿದ್ದರು. ಈ ಬಾರಿ ಸುಪ್ರೀಂಕೋರ್ಟ್ ಮುಂದೆಯೇ ಅರ್ಜಿ ಸಲ್ಲಿಸಿದ್ದಾರೆ.
ಒಂದು ಸುಪ್ರೀಂಕೋರ್ಟ್ ನನಗೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಸ್ಥಳವನ್ನು ನನಗೆ ಹಸ್ತಾಂತರಿಸಿದರೆ. ರಾಮಮಂದಿರ ನಿರ್ಮಿಸಲು ನಾನು ಇಡೀ ಜಾಗವನ್ನು ದಾನವಾಗಿ ನೀಡುವುದಾಗಿ ಘೋಷಿಸಿದ್ದಾರೆ.
ವಿವಾದಿತ ಜಾಗಕ್ಕೆ ಸಂಬಂಧಿಸಿ ಯಾರಲ್ಲೂ ದಾಖಲೆಗಳಿಲ್ಲ. ಆದರೆ ತಾವು ಮೊಘಲ್ ವಂಶಸ್ಥನಾಗಿರುವುದರಿಂದ ಆ ಜಾಗದ ಮೇಲೆ ಹಕ್ಕಿದೆ. ಹೀಗಾಗಿ ಹೆಚ್ಚಿನ ಗೊಂದಲಕ್ಕೆ ಅವಕಾಶವಿಲ್ಲದಂತೆ ವಿವಾದಿತ ಜಾಗವನ್ನು ನಮ್ಮ ಹೆಸರಿಗೆ ಹಸ್ತಾಂತರಿಸಬೇಕು ಎನ್ನುವುದು ಟ್ಯೂಸಿ ವಾದ. ಹಾಗೆ ಸುಪ್ರೀಂಕೋರ್ಟ್ ತಮ್ಮ ಹೆಸರಿಗೆ ಜಾಗ ನೀಡಿದರೆ ಮಂದಿರ ಕಟ್ಟಲು ಜಾಗ ನೀಡುವುದಾಗಿ ಟ್ಯೂಸಿ ಹೇಳುತ್ತಾರೆ. ಬಾಬರಿ ಮಸೀದಿ ನಿರ್ಮಾಣವಾಗಿದ್ದು ಸೇನೆಯ ನಮಾಜ್ಗಾಗಿ ಮಾತ್ರ. ಅಲ್ಲಿ ಮೊದಲು ಏನಿತ್ತು ಎನ್ನುವ ವಿಚಾರಕ್ಕೆ ನಾನು ಹೋಗುವುದಿಲ್ಲ. ಒಬ್ಬ ನೈಜ ಮುಸ್ಲಿಮನಾಗಿ ಅವರ ಭಾವನೆಗಳನ್ನು ಗೌರವಿಸಿ ಜಾಗ ಬಿಟ್ಟುಕೊಡುತ್ತೇನೆ ಎನ್ನುತ್ತಾರೆ ಟ್ಯೂಸಿ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…