Featured

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ, ಇದು ನಿಜವಾದ ಗೋಕುಲಾಷ್ಟಮಿಯಾಗಿದೆ : ವಿನಯ್‌ ಗುರೂಜಿ -Vishwanews24

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ, ಇದು ನಿಜವಾದ ಗೋಕುಲಾಷ್ಟಮಿಯಾಗಿದೆ : ವಿನಯ್‌ ಗುರೂಜಿ -Vishwanews24

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ, ಇದು ನಿಜವಾದ ಗೋಕುಲಾಷ್ಟಮಿಯಾಗಿದೆ  ಎಂದು ಮಹಾತ್ಮಗಾಂಧಿ ಸೇವಾ ಟ್ರಸ್ಟ್‌ ಸಂಸ್ಥಾಪಕ ವಿನಯ್‌ ಗುರೂಜಿ ಹೇಳಿದರು.

ಕೋಮುಗಲಭೆಗಳನ್ನು ನಿಯಂತ್ರಿಸಲು ಮತ್ತು ಜನರಲ್ಲಿ ಧರ್ಮಗ್ರಂಥಗಳ ಅರಿವು ಮೂಡಿಸುವುದಕ್ಕಾಗಿ ರಾಜ್ಯ ಸರ್ಕಾರವು ಶಾಲಾ ಪಠ್ಯದಲ್ಲಿ ಎಲ್ಲಾ ಧರ್ಮಗ್ರಂಥಗಳನ್ನು ಕುರಿತ ಪಾಠಗಳನ್ನು ಅಳವಡಿಸುವಂತೆ  ವಿನಯ್‌ ಗುರೂಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಗುರೂಜಿ ಅವರು ಗುರುವಾರ ಗೋವಿನ ಪೂಜೆ ನೆರವೇರಿಸಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಧರ್ಮಗ್ರಂಥಗಳನ್ನು ಅಳವಡಿಸುವುದರಿಂದ ಧರ್ಮದ ಬಗ್ಗೆ ಜನರಿಗೆ ಇರುವ ತಪ್ಪು ಕಲ್ಪನೆಗಳು ನಿವಾರಣೆಯಾಗಲಿವೆ ಮತ್ತು ಧರ್ಮದ ಕುರಿತು ಅರಿವು ಮೂಡಲಿದೆ. ಇದರ ಜೊತೆಗೆ ಸನಾತನ ಭಾರತದ ಸಂಸ್ಕಾರ ಕೂಡ ಮುಂದಿನ ಪೀಳಿಗೆಗೆ ತಲುಪಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಪ್ರತಿ ತಾಲೂಕು ಕೇಂದ್ರಗಳಲ್ಲಿ ಗೋ ಶಾಲೆ ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳು ನಿರ್ಮಾಣ ಆಗಬೇಕು. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವುದರಿಂದ ಪ್ರತಿ ಜಿಲ್ಲೆಯಲ್ಲಿ ಗೋ ಸಂರಕ್ಷಣಾ ಕೇಂದ್ರ ಸ್ಥಾಪನೆ ಮಾಡಬೇಕು. ಇದರಿಂದ ಸ್ಥಳೀಯವಾಗಿ ಜನರಿಗೆ ಉದ್ಯೋಗ ಸಿಗಲಿದೆ ಮತ್ತು ಗೋ ಉತ್ಪನ್ನಗಳ ಸಂಶೋಧನೆ ನಡೆಸಲು ಸಹಕಾರಿಯಾಗಲಿದೆ ಎಂದರು.

ಕಾಯ್ದೆ ಜಾರಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಕೋಟ್ಯಂತರ ಹಿಂದೂಗಳು ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ. ಇದು ನಿಜವಾದ ಗೋಕುಲಾಷ್ಟಮಿಯಾಗಿದೆ ಎಂದು ಹೇಳಿದರು.

ಕಳೆದ ಆರು ತಿಂಗಳ ಹಿಂದೆ ಅಗ್ನಿಹೋತ್ರ ಮಾಡಿದರೆ ಕೊರೋನಾ ಸೋಂಕು ಹರಡುವುದಿಲ್ಲ ಎಂದು ಸಲಹೆ ನೀಡಿದಾಗ ನಗೆಪಾಟಲಿಗೆ ಈಡಾಗಿದ್ದೆ. ಇಂದು ಕನಿಷ್ಠ ಐದು ಸಾವಿರ ಜನ ಅಗ್ನಿಹೋತ್ರ ಮಾಡುತ್ತಿದ್ದಾರೆ. ಅವರ ಕುಟುಂಬದ ಯಾವೊಬ್ಬ ಸದಸ್ಯರಿಗೂ ಕೊರೋನಾ ಬಂದಿಲ್ಲ. ಇದರಿಂದ ಗೋವಿನಲ್ಲಿರುವ ಶಕ್ತಿ ಎಂಥದ್ದು ಎಂದು ತಿಳಿಯುತ್ತದೆ ಎಂದರು.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago