ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ, ಇದು ನಿಜವಾದ ಗೋಕುಲಾಷ್ಟಮಿಯಾಗಿದೆ ಎಂದು ಮಹಾತ್ಮಗಾಂಧಿ ಸೇವಾ ಟ್ರಸ್ಟ್ ಸಂಸ್ಥಾಪಕ ವಿನಯ್ ಗುರೂಜಿ ಹೇಳಿದರು.
ಕೋಮುಗಲಭೆಗಳನ್ನು ನಿಯಂತ್ರಿಸಲು ಮತ್ತು ಜನರಲ್ಲಿ ಧರ್ಮಗ್ರಂಥಗಳ ಅರಿವು ಮೂಡಿಸುವುದಕ್ಕಾಗಿ ರಾಜ್ಯ ಸರ್ಕಾರವು ಶಾಲಾ ಪಠ್ಯದಲ್ಲಿ ಎಲ್ಲಾ ಧರ್ಮಗ್ರಂಥಗಳನ್ನು ಕುರಿತ ಪಾಠಗಳನ್ನು ಅಳವಡಿಸುವಂತೆ ವಿನಯ್ ಗುರೂಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಗುರೂಜಿ ಅವರು ಗುರುವಾರ ಗೋವಿನ ಪೂಜೆ ನೆರವೇರಿಸಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಧರ್ಮಗ್ರಂಥಗಳನ್ನು ಅಳವಡಿಸುವುದರಿಂದ ಧರ್ಮದ ಬಗ್ಗೆ ಜನರಿಗೆ ಇರುವ ತಪ್ಪು ಕಲ್ಪನೆಗಳು ನಿವಾರಣೆಯಾಗಲಿವೆ ಮತ್ತು ಧರ್ಮದ ಕುರಿತು ಅರಿವು ಮೂಡಲಿದೆ. ಇದರ ಜೊತೆಗೆ ಸನಾತನ ಭಾರತದ ಸಂಸ್ಕಾರ ಕೂಡ ಮುಂದಿನ ಪೀಳಿಗೆಗೆ ತಲುಪಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಪ್ರತಿ ತಾಲೂಕು ಕೇಂದ್ರಗಳಲ್ಲಿ ಗೋ ಶಾಲೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ನಿರ್ಮಾಣ ಆಗಬೇಕು. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವುದರಿಂದ ಪ್ರತಿ ಜಿಲ್ಲೆಯಲ್ಲಿ ಗೋ ಸಂರಕ್ಷಣಾ ಕೇಂದ್ರ ಸ್ಥಾಪನೆ ಮಾಡಬೇಕು. ಇದರಿಂದ ಸ್ಥಳೀಯವಾಗಿ ಜನರಿಗೆ ಉದ್ಯೋಗ ಸಿಗಲಿದೆ ಮತ್ತು ಗೋ ಉತ್ಪನ್ನಗಳ ಸಂಶೋಧನೆ ನಡೆಸಲು ಸಹಕಾರಿಯಾಗಲಿದೆ ಎಂದರು.
ಕಾಯ್ದೆ ಜಾರಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಕೋಟ್ಯಂತರ ಹಿಂದೂಗಳು ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ. ಇದು ನಿಜವಾದ ಗೋಕುಲಾಷ್ಟಮಿಯಾಗಿದೆ ಎಂದು ಹೇಳಿದರು.
ಕಳೆದ ಆರು ತಿಂಗಳ ಹಿಂದೆ ಅಗ್ನಿಹೋತ್ರ ಮಾಡಿದರೆ ಕೊರೋನಾ ಸೋಂಕು ಹರಡುವುದಿಲ್ಲ ಎಂದು ಸಲಹೆ ನೀಡಿದಾಗ ನಗೆಪಾಟಲಿಗೆ ಈಡಾಗಿದ್ದೆ. ಇಂದು ಕನಿಷ್ಠ ಐದು ಸಾವಿರ ಜನ ಅಗ್ನಿಹೋತ್ರ ಮಾಡುತ್ತಿದ್ದಾರೆ. ಅವರ ಕುಟುಂಬದ ಯಾವೊಬ್ಬ ಸದಸ್ಯರಿಗೂ ಕೊರೋನಾ ಬಂದಿಲ್ಲ. ಇದರಿಂದ ಗೋವಿನಲ್ಲಿರುವ ಶಕ್ತಿ ಎಂಥದ್ದು ಎಂದು ತಿಳಿಯುತ್ತದೆ ಎಂದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…