Featured

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ, ಇದು ನಿಜವಾದ ಗೋಕುಲಾಷ್ಟಮಿಯಾಗಿದೆ : ವಿನಯ್‌ ಗುರೂಜಿ -Vishwanews24

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ, ಇದು ನಿಜವಾದ ಗೋಕುಲಾಷ್ಟಮಿಯಾಗಿದೆ : ವಿನಯ್‌ ಗುರೂಜಿ -Vishwanews24

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ, ಇದು ನಿಜವಾದ ಗೋಕುಲಾಷ್ಟಮಿಯಾಗಿದೆ  ಎಂದು ಮಹಾತ್ಮಗಾಂಧಿ ಸೇವಾ ಟ್ರಸ್ಟ್‌ ಸಂಸ್ಥಾಪಕ ವಿನಯ್‌ ಗುರೂಜಿ ಹೇಳಿದರು.

ಕೋಮುಗಲಭೆಗಳನ್ನು ನಿಯಂತ್ರಿಸಲು ಮತ್ತು ಜನರಲ್ಲಿ ಧರ್ಮಗ್ರಂಥಗಳ ಅರಿವು ಮೂಡಿಸುವುದಕ್ಕಾಗಿ ರಾಜ್ಯ ಸರ್ಕಾರವು ಶಾಲಾ ಪಠ್ಯದಲ್ಲಿ ಎಲ್ಲಾ ಧರ್ಮಗ್ರಂಥಗಳನ್ನು ಕುರಿತ ಪಾಠಗಳನ್ನು ಅಳವಡಿಸುವಂತೆ  ವಿನಯ್‌ ಗುರೂಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಗುರೂಜಿ ಅವರು ಗುರುವಾರ ಗೋವಿನ ಪೂಜೆ ನೆರವೇರಿಸಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಧರ್ಮಗ್ರಂಥಗಳನ್ನು ಅಳವಡಿಸುವುದರಿಂದ ಧರ್ಮದ ಬಗ್ಗೆ ಜನರಿಗೆ ಇರುವ ತಪ್ಪು ಕಲ್ಪನೆಗಳು ನಿವಾರಣೆಯಾಗಲಿವೆ ಮತ್ತು ಧರ್ಮದ ಕುರಿತು ಅರಿವು ಮೂಡಲಿದೆ. ಇದರ ಜೊತೆಗೆ ಸನಾತನ ಭಾರತದ ಸಂಸ್ಕಾರ ಕೂಡ ಮುಂದಿನ ಪೀಳಿಗೆಗೆ ತಲುಪಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಪ್ರತಿ ತಾಲೂಕು ಕೇಂದ್ರಗಳಲ್ಲಿ ಗೋ ಶಾಲೆ ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳು ನಿರ್ಮಾಣ ಆಗಬೇಕು. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವುದರಿಂದ ಪ್ರತಿ ಜಿಲ್ಲೆಯಲ್ಲಿ ಗೋ ಸಂರಕ್ಷಣಾ ಕೇಂದ್ರ ಸ್ಥಾಪನೆ ಮಾಡಬೇಕು. ಇದರಿಂದ ಸ್ಥಳೀಯವಾಗಿ ಜನರಿಗೆ ಉದ್ಯೋಗ ಸಿಗಲಿದೆ ಮತ್ತು ಗೋ ಉತ್ಪನ್ನಗಳ ಸಂಶೋಧನೆ ನಡೆಸಲು ಸಹಕಾರಿಯಾಗಲಿದೆ ಎಂದರು.

ಕಾಯ್ದೆ ಜಾರಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಕೋಟ್ಯಂತರ ಹಿಂದೂಗಳು ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ. ಇದು ನಿಜವಾದ ಗೋಕುಲಾಷ್ಟಮಿಯಾಗಿದೆ ಎಂದು ಹೇಳಿದರು.

ಕಳೆದ ಆರು ತಿಂಗಳ ಹಿಂದೆ ಅಗ್ನಿಹೋತ್ರ ಮಾಡಿದರೆ ಕೊರೋನಾ ಸೋಂಕು ಹರಡುವುದಿಲ್ಲ ಎಂದು ಸಲಹೆ ನೀಡಿದಾಗ ನಗೆಪಾಟಲಿಗೆ ಈಡಾಗಿದ್ದೆ. ಇಂದು ಕನಿಷ್ಠ ಐದು ಸಾವಿರ ಜನ ಅಗ್ನಿಹೋತ್ರ ಮಾಡುತ್ತಿದ್ದಾರೆ. ಅವರ ಕುಟುಂಬದ ಯಾವೊಬ್ಬ ಸದಸ್ಯರಿಗೂ ಕೊರೋನಾ ಬಂದಿಲ್ಲ. ಇದರಿಂದ ಗೋವಿನಲ್ಲಿರುವ ಶಕ್ತಿ ಎಂಥದ್ದು ಎಂದು ತಿಳಿಯುತ್ತದೆ ಎಂದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

16 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

19 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

19 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

21 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

21 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

1 day ago