Featured

ಅಯೋಧ್ಯೆಯಲ್ಲಿ ರಾಮ ಮಂದಿರದ ಜೊತೆಗೆ ದೂರದಲ್ಲಿ ಮಸೀದಿಯೂ ನಿರ್ಮಾಣವಾಗಲಿ, ಹಿಂದೂ ಮತ್ತು ಮುಸ್ಲಿಂ ಎಂಬ ತಾರತಮ್ಯ ಬೇಡ, ನಾವೆಲ್ಲರೂ ಒಂದೇ,” : ಪೇಜಾವರ ಶ್ರೀ -Vishwanews24

ಹಾಸನ: ಹಿಂದು-ಮುಸ್ಲಿಂ ಎಂಬ ತಾರತಮ್ಯ ಬೇಡ. ನಾವೆಲ್ಲರೂ ಒಂದೇ. ಆದರೆ, ರಾಮಮಂದಿರ ನಿರ್ಮಾಣವಾಗಲೇಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹೇಳಿದರು.

ಹಾಸನಕ್ಕೆ ಆಗಮಿಸಿದ್ದ ಶ್ರೀಗಳು ಸುದ್ದಿಗಾರರೊಂದಿಗೆ ಮಾತನಾಡಿ, ”ರಾಮಮಂದಿರ ನಿರ್ಮಾಣಕ್ಕೆ ರವಿಶಂಕರ್‌ ಗುರೂಜಿ ಮಧ್ಯಸ್ಥಿಕೆ ವಹಿಸುವ ಜವಾಬ್ದಾರಿ ನೀಡಿರುವುದನ್ನು ನಾನು ಸ್ವಾಗತಿಸುತ್ತೇನೆ. ರಾಮಮಂದಿರ ನಿರ್ಮಾಣ ಆಗಲೇಬೇಕು. ಅಯೋಧ್ಯೆಯ ಸ್ವಲ್ಪ ದೂರದಲ್ಲಿ ಮುಸಲ್ಮಾನರಿಗೂ ಮಸೀದಿ ಆಗಲಿ. ಹಿಂದೂ ಮತ್ತು ಮುಸ್ಲಿಂ ಎಂಬ ತಾರತಮ್ಯ ಬೇಡ, ನಾವೆಲ್ಲರೂ ಒಂದೇ,” ಎಂದು ಪ್ರತಿಪಾದಿಸಿದರು.

”ಸುಪ್ರೀಂ ಕೋರ್ಟ್‌ ರಚಿಸಿರುವ ಸಮಿತಿಗೆ ಇನ್ನೂ ಎರಡು ತಿಂಗಳ ಕಾಲಾವಕಾಶವಿದೆ. ಸಮಿತಿ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡೋಣ. ಆದರೆ, ಸಮಿತಿಯ ಸಂಧಾನದಿಂದ ಅಯೋಧ್ಯೆ ಪರಿಸ್ಥಿತಿ ಬಗೆಹರಿಯುವುದಿಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ,” ಎಂದರು.

ಚುನಾವಣೆ ಕುರಿತು ಮಾತನಾಡಿದ ಅವರು, ”ರಾಜಕೀಯವಾಗಿ ನಾನು ಏನನ್ನೂ ಈ ಸಂದರ್ಭದಲ್ಲಿ ಮಾತನಾಡುವುದಿಲ್ಲ. ಆದರೆ ಮತದಾರರು ದೇಶದ ಬಗ್ಗೆ ಕಾಳಜಿ ಇಟ್ಟುಕೊಂಡು ಮತದಾನ ಮಾಡಬೇಕು. ಇವತ್ತಿನ ನಾಗರಿಕರು ಪ್ರಬುದ್ಧರಿದ್ದಾರೆ. ಯಾರನ್ನು ಆರಿಸಬೇಕೆಂಬ ಅರಿವು ಅವರಿಗಿದೆ. ಯಾವುದೇ ಪಕ್ಷ ಕ್ಕೆ ಮತ ಹಾಕಿ ಎಂದು ಹೇಳುವುದಿಲ್ಲ. ನಾನು ಪಕ್ಷಾತೀತವಾಗಿ ಮತ ಚಲಾಯಿಸಿ ಎಂದು ಹೇಳುವೆ. ರಾಜ್ಯವನ್ನು ಸಮರ್ಥನೆ ಮಾಡುವ ನಾಯಕನನ್ನು ಆರಿಸುವ ಹೊಣೆಗಾರಿಕೆ ಮತದಾರರದ್ದಾಗಿರಲಿ,” ಎಂದು ನುಡಿದರು

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago