Featured

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ ಎಂದಿಗೂ ವಿರೋಧಿಸಿಲ್ಲ : ರಾಜ್‌ ಬಬ್ಬರ್

ಇಂದೋರ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಎಂದೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಉತ್ತರ ಪ್ರದೇಶದ ‘ಕೈ’ ಮುಖಂಡ ರಾಜ್ ಬಬ್ಬರ್ ಹೇಳಿದ್ದಾರೆ.

ಮಧ್ಯಪ್ರದೇಶ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು,  “ಕಾಂಗ್ರೆಸ್ ಪಕ್ಷ ರಾಮ ಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿರಲಿಲ್ಲ. ಈಗ ‘ಮುಸ್ಲಿಂ ಸಮಾಜಕ್ಕೂ ಮಂದಿರ ಬೇಕೆಂದು ನಮಗನ್ನಿಸುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಚರ್ಚೆ ಮಾಡುವುದಿಲ್ಲು. ಈ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಸುಪ್ರೀಂಕೋರ್ಟ್ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. “ಆದರೆ ಬಿಜೆಪಿ ಮಾತ್ರ ಪ್ರತಿ ಚುನಾವಣೆಯಲ್ಲಿಯೂ ರಾಮ ಮಂದಿರ ವಿಷಯವನ್ನು ಮುನ್ನೆಲೆಗೆ ತರುತ್ತದೆ. ಬಿಜೆಪಿ ರಾಮನೆಡೆಗೆ ಎಂದಿಗೂ ವಿಶೇಷ ಭಾವನೆ ಹೊಂದಿರಲಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಮ, ರಾಮ ಮಂದಿರದ ಹೆಸರಿನಲ್ಲಿ ಮತ ಕೇಳುತ್ತದೆ” ಎಂದು ರಾಜ್ ಬಬ್ಬರ್ ಟೀಕಿಸಿದರು.

‘ಎಲ್ಲರೂ ರಾಮ ಮಂದಿರದ ನಿರ್ಮಾಣವನ್ನು ಬಯಸುತ್ತಾರೆ. ಮಂದಿರವನ್ನು ನಿರ್ಮಿಸಬೇಕೆಂದು ಮುಸ್ಲಿಮರು ಬಯಸುತ್ತಿದ್ದಾರೆಂದು ನಾನು ಭಾವಿಸುತ್ತೇನೆ. ಆದರೆ, ಸುಪ್ರೀಂಕೋರ್ಟ್‌ನಲ್ಲಿ ಈ ಪ್ರಕರಣ ಇನ್ನೂ ಬಾಕಿ ಇರುವುದರಿಂದ ಅದು(ನ್ಯಾಯಾಲಯ) ಈ ಸಮಸ್ಯೆಯನ್ನು ನಿರ್ಧರಿಸುತ್ತದೆ’ ಎಂದರು.

ರಾಮ ಮಂದಿರ ನಿರ್ಮಾಣವನ್ನು ಕಾಂಗ್ರೆಸ್ ಹಿಂದೆಯೂ ವಿರೋಧಿಸಿರಲಿಲ್ಲ. ಮುಂದೆಯೂ ವಿರೋಧಿಸುವುದಿಲ್ಲ ಬಬ್ಬರ್ ಸ್ಪಷ್ಟಪಡಿಸಿದರು.

 

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

10 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

11 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago