ಹೊಸದಿಲ್ಲಿ: ‘ರಾಮಮಂದಿರಕ್ಕೆ ಭೂಮಿಪೂಜೆ ನೆರವೇರುತ್ತಿರುವುದು ಒಂದು ಐತಿಹಾಸಿಕ ಹಾಗೂ ಭಾವನಾತ್ಮಕ ಕ್ಷಣ. ಇಷ್ಟು ವರ್ಷಗಳ ಕಾಯುವಿಕೆಯು ಕೊನೆಗೂ ಸಾರ್ಥಕವಾಯಿತು.’ ಎಂದೂ ಬಿಜೆಪಿ ಹಿರಿಯ ಮುತ್ಸದ್ಧಿ, ರಾಮಜನ್ಮಭೂಮಿ ಚಳವಳಿಯ ನೇತೃತ್ವ ವಹಿಸಿದ್ದ ಎಲ್.ಕೆ.ಆಡ್ವಾಣಿ ಹೇಳಿದ್ದಾರೆ.
ಭೂಮಿಪೂಜೆ ಹಿನ್ನೆಲೆಯಲ್ಲಿ ಮಂಗಳವಾರ ಈ ಹೇಳಿಕೆ ನೀಡಿರುವ 92 ವರ್ಷ ವಯಸ್ಸಿನ ಆಡ್ವಾಣಿ, “ಇದು ಕೇವಲ ನನಗೆ ಮಾತ್ರವಲ್ಲ, ಎಲ್ಲ ಭಾರತೀಯರಿಗೂ ಐತಿಹಾಸಿಕ ಮತ್ತು ಭಾವನಾತ್ಮಕ ದಿನವಾಗಿದೆ. ರಾಮಜನ್ಮಭೂಮಿ ಚಳವಳಿಯ ಸಮಯದಲ್ಲಿ ವಿಧಿಯು ನನಗೆ ಸೋಮನಾಥದಿಂದ ಅಯೋಧ್ಯೆಯವರೆಗೆ ರಾಮ ರಥಯಾತ್ರೆಯ ರೂಪದಲ್ಲಿ ಪವಿತ್ರ ಕಾರ್ಯವೊಂದನ್ನು ನೆರವೇರಿಸಲು ಅವಕಾಶ ಕಲ್ಪಿಸಿತು. ಅಂದಿನ ಯಾತ್ರೆಯು ಅಪರಿಮಿತ ಭಕ್ತಾದಿಗಳ ಆಕಾಂಕ್ಷೆ, ಶಕ್ತಿ ಹಾಗೂ ಉತ್ಸಾಹವನ್ನು ತೋರಿಸಿತು’ ಎಂದಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಭವ್ಯ ಮಂದಿರ ನಿರ್ಮಾಣವಾಗಬೇಕು ಎನ್ನುವುದು ಬಿಜೆಪಿಯ ಧ್ಯೇಯವಾಗಿತ್ತು. ಇಂದಿನ ಈ ಶುಭಸಂದರ್ಭದಲ್ಲಿ ನಾನು, ರಾಮಜನ್ಮಭೂಮಿ ಚಳವಳಿಗೆ ಮೌಲ್ಯಯುತ ಕೊಡುಗೆಗಳನ್ನು ನೀಡಿದ, ತ್ಯಾಗಗಳನ್ನು ಮಾಡಿದ ಸಂತರು, ನಾಯಕರು ಹಾಗೂ ದೇಶ-ವಿದೇಶಗಳಲ್ಲಿನ ಜನರಿಗೆ ನಾನು ಧನ್ಯವಾದ ಹೇಳಬಯಸುತ್ತೇನೆ ಎಂದೂ ಆಡ್ವಾಣಿ ಹೇಳಿದ್ದಾರೆ.
ಶ್ರೀರಾಮ ಮಂದಿರವು ಭಾರತವನ್ನು ಒಂದು ಬಲಿಷ್ಠ, ಸಮೃದ್ಧ, ಶಾಂತಿಯುತ ಹಾಗೂ ಸಾಮರಸ್ಯಭರಿತ ದೇಶವನ್ನಾಗಿ ಪ್ರತಿನಿಧಿಸಲಿದೆ ಮತ್ತು ಎಲ್ಲರಿಗೂ ನ್ಯಾಯ ಒದಗಿಸುವ, ಯಾರನ್ನೂ ಹೊರಗಿಡದ ರಾಮರಾಜ್ಯವು ಸೃಷ್ಟಿಯಾಗಲಿದೆ ಎನ್ನುವ ವಿಶ್ವಾಸ ನನಗಿದೆ ಎಂದೂ ಆಡ್ವಾಣಿ ಅವರು ನುಡಿದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…