ಅಯೋಧ್ಯೆಯಲ್ಲಿ ಸಾರ್ವಜನಿಕರಿಗೆ ಅವಕಾಶ… ರಾಮನ ದರ್ಶನಕ್ಕೆ ಸಾಲುಗಟ್ಟಿ ನಿಂತ ಭಕ್ತರು – vishwanews24

Featured, ರಾಷ್ಟ್ರ ನ್ಯೂಸ್

ಅಯೋಧ್ಯೆಯಲ್ಲಿ ಸಾರ್ವಜನಿಕರಿಗೆ ಅವಕಾಶ… ರಾಮನ ದರ್ಶನಕ್ಕೆ ಸಾಲುಗಟ್ಟಿ ನಿಂತ ಭಕ್ತರು

ಅಯೋಧ್ಯೆ: 500 ವರ್ಷಗಳ ಬಳಿಕ ಭಗವಾನ್‌ ರಾಮ  ಸೋಮವಾರ ತನ್ನ ವಾಸಸ್ಥಾನಕ್ಕೆ ಮರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಶಾಸ್ತ್ರೋಕ್ತವಾಗಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯಾಗಿದೆ . ಇದಾದ ಬಳಿಕ ಸಾವರ್ಜನಿಕರ ದರ್ಶನಕ್ಕೆ ಅನುಮತಿ ನೀಡಲಾಯಿತು.

ಸಾರ್ವಜನಿಕರಿಗೆ ರಾಮಮಂದಿರದಲ್ಲಿ ಬಾಲರಾಮನ ದರ್ಶನಕ್ಕೆ ಅವಕಾಶ ನೀಡುತ್ತಿದ್ದಂತೆಯೇ ಭಕ್ತರ ದಂಡೇ ಹರಿದು ಬರಲಾರಂಭಿಸಿದೆ. ಸೋಮವಾರ ರಾತ್ರಿಯಿಂದಲೇ ಅಯೋಧ್ಯಾಧಾಮದಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಅಲ್ಲದೇ ತೀವ್ರ ಚಳಿಯನ್ನೂ ಲೆಕ್ಕಿಸದೇ ದೇವಸ್ಥಾನದ ಹೊರಗಡೆಯೂ ಸಾವಿರಾರು ಜನ ಜಮಾಯಿಸತೊಡಗಿದರು.

ಉಡುಪಿ : ವಾಯುಪಡೆ ನೇಮಕಾತಿ – ನೋಂದಣಿ ಪ್ರಕ್ರಿಯೆ ಆರಂಭ – vishwanews24

ತಡರಾತ್ರಿಯಿಂದಲೇ ರಾಮ ಮಂದಿರದ ಮುಖ್ಯ ದ್ವಾರದ ಹೊರಗೆ ಭಕ್ತಾದಿಗಳ ಉದ್ದನೆಯ ಸಾಲು ಆರಂಭವಾಗಿತ್ತು. ಬೆಳಗ್ಗಿನ ಜಾವ 2 ಗಂಟೆಯಿಂದಲೇ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಲಾರಂಭಿಸಿದರು. ನೆರೆದಿದ್ದ ಜನರು ದ್ವಾರದ ಮುಂದೆ ʼಜೈ ಶ್ರೀ ರಾಮ್ʼ ಎಂದು ಘೋಷಣೆ ಕೂಗುತ್ತಾ ದೇಗುಲದೊಳಗೆ ಪ್ರವೇಶಿಸುತ್ತಿದ್ದಾರೆ. ದೇಶಾದ್ಯಂತ ಭಕ್ತರನ್ನು ಒಟ್ಟುಗೂಡಿಸುವ ಪ್ರಕ್ರಿಯೆ ಮುಂದುವರಿದಿದೆ. ಜೊತೆಗೆ ಅಯೋಧ್ಯೆಯ ಸ್ಥಳೀಯ ನಿವಾಸಿಗಳು ಕೂಡ ಬಾಲರಾಮನ ದರ್ಶನ ಮತ್ತು ಪೂಜೆಗಾಗಿ ಆಗಮಿಸುತ್ತಿದ್ದಾರೆ. ರಾಮಪಥದಲ್ಲಿ ಕಾಲಿಡಕ್ಕೂ ಜಾಗವಿಲ್ಲದಷ್ಟು ಭಕ್ತರು ನೆರೆದಿದ್ದಾರೆ. ಕ್ಷಣಕ್ಷಣಕ್ಕೂ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್‌ ವ್ಯವಸ್ಥೆ ಕೂಡ ಮಾಡಲಾಗಿದೆ.

ಉಡುಪಿ : ರಾಮಮಂದಿರ ಉದ್ಘಾಟನೆ – ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ 8 ಸಾವಿರ ಜಿಲೇಬಿ ವಿತರಣೆ – vishwanews24

Leave a Reply