ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದರು.
ಮೋದಿ ಅವರು 22 ಅಡಿ ಎತ್ತರದ ಕೇಸರಿ ಧ್ವಜವನ್ನು ಹಾರಿಸಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದರು. ಪ್ರಧಾನಿಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಾಥ್ ನೀಡಿದರು.
ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಪ್ರಧಾನಿ ಮೋದಿ ಮತ್ತು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ರಾಮ ದರ್ಬಾರ್ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗರ್ಭಗುಡಿಯಲ್ಲಿ ಆರತಿ ಬೆಳಗಿದರು. ರಾಮಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಧ್ವಜದ ವಿಶೇಷತೆಗಳೇನು ?
* ರಾಮಮಂದಿರದ ಮೇಲೆ ಹಾರಾಡುತ್ತಿರುವ ಧ್ವಜ ತುಂಬಾ ವಿಶೇಷವಾಗಿದ್ದು, ದೈವಿಕ ಧ್ವಜವನ್ನು ಗುಜರಾತ್ನ ಅಹಮದಾಬಾದ್ನಲ್ಲಿ ತಯಾರಿಸಲಾಗಿದೆ.
* ಅಯೋಧ್ಯೆ ರಾಮ ಮಂದಿರದ ಧಾರ್ಮಿಕ ಧ್ವಜದಲ್ಲಿರುವ ಚಿಹ್ನೆಗಳಿಗೆ ಪ್ರತಿಯೊಂದಕ್ಕೂ ವಿಶೇಷ ಅರ್ಥವಿದೆ. ಕೇಸರಿ ಬಣ್ಣದ ಧ್ವಜ, ಸೂರ್ಯ ದೇವರು ಮತ್ತು ಓಂ ಚಿಹ್ನೆ ಹೊಂದಿದೆ.
* ಧಾರ್ಮಿಕ ಮಹತ್ವವುಳ್ಳ ವಿಶಿಷ್ಟವಾದ ಮರದ ಚಿತ್ರವನ್ನು ಸಹ ಧ್ವಜದ ಮೇಲೆ ಚಿತ್ರಿಸಲಾಗಿದೆ.
* ತಯಾರಿಸಲು 25 ದಿನಗಳು ಬೇಕಾಯಿತು. ಮೂರು ಪದರಗಳ ಬಟ್ಟೆಯಿಂದ ತಯಾರಿಸಲಾಗಿದೆ. ಇದರಲ್ಲಿ ಬಳಸಲಾದ ಪ್ರತಿಯೊಂದು ಅಂಶವೂ ಸ್ಥಳೀಯವಾಗಿದೆ.
* ಅಂಚುಗಳನ್ನು ಗೋಲ್ಡನ್ ರೇಷ್ಮೆಯಿಂದ ಮಾಡಲಾಗಿದ್ದು, ಎಲ್ಲಾ ಚಿಹ್ನೆಗಳು ಕೈಯಿಂದ ಮಾಡಲಾಗಿದೆ. ಅವೆಲ್ಲವನ್ನೂ ಕೈಯಿಂದ ರಚಿಸಲು 7-8 ದಿನಗಳು ಬೇಕಾಯಿತು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…