ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದರು.
ಮೋದಿ ಅವರು 22 ಅಡಿ ಎತ್ತರದ ಕೇಸರಿ ಧ್ವಜವನ್ನು ಹಾರಿಸಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದರು. ಪ್ರಧಾನಿಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಾಥ್ ನೀಡಿದರು.
ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಪ್ರಧಾನಿ ಮೋದಿ ಮತ್ತು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ರಾಮ ದರ್ಬಾರ್ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗರ್ಭಗುಡಿಯಲ್ಲಿ ಆರತಿ ಬೆಳಗಿದರು. ರಾಮಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಧ್ವಜದ ವಿಶೇಷತೆಗಳೇನು ?
* ರಾಮಮಂದಿರದ ಮೇಲೆ ಹಾರಾಡುತ್ತಿರುವ ಧ್ವಜ ತುಂಬಾ ವಿಶೇಷವಾಗಿದ್ದು, ದೈವಿಕ ಧ್ವಜವನ್ನು ಗುಜರಾತ್ನ ಅಹಮದಾಬಾದ್ನಲ್ಲಿ ತಯಾರಿಸಲಾಗಿದೆ.
* ಅಯೋಧ್ಯೆ ರಾಮ ಮಂದಿರದ ಧಾರ್ಮಿಕ ಧ್ವಜದಲ್ಲಿರುವ ಚಿಹ್ನೆಗಳಿಗೆ ಪ್ರತಿಯೊಂದಕ್ಕೂ ವಿಶೇಷ ಅರ್ಥವಿದೆ. ಕೇಸರಿ ಬಣ್ಣದ ಧ್ವಜ, ಸೂರ್ಯ ದೇವರು ಮತ್ತು ಓಂ ಚಿಹ್ನೆ ಹೊಂದಿದೆ.
* ಧಾರ್ಮಿಕ ಮಹತ್ವವುಳ್ಳ ವಿಶಿಷ್ಟವಾದ ಮರದ ಚಿತ್ರವನ್ನು ಸಹ ಧ್ವಜದ ಮೇಲೆ ಚಿತ್ರಿಸಲಾಗಿದೆ.
* ತಯಾರಿಸಲು 25 ದಿನಗಳು ಬೇಕಾಯಿತು. ಮೂರು ಪದರಗಳ ಬಟ್ಟೆಯಿಂದ ತಯಾರಿಸಲಾಗಿದೆ. ಇದರಲ್ಲಿ ಬಳಸಲಾದ ಪ್ರತಿಯೊಂದು ಅಂಶವೂ ಸ್ಥಳೀಯವಾಗಿದೆ.
* ಅಂಚುಗಳನ್ನು ಗೋಲ್ಡನ್ ರೇಷ್ಮೆಯಿಂದ ಮಾಡಲಾಗಿದ್ದು, ಎಲ್ಲಾ ಚಿಹ್ನೆಗಳು ಕೈಯಿಂದ ಮಾಡಲಾಗಿದೆ. ಅವೆಲ್ಲವನ್ನೂ ಕೈಯಿಂದ ರಚಿಸಲು 7-8 ದಿನಗಳು ಬೇಕಾಯಿತು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…