Featured

ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರು : ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ -Vishwanews24

ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರು : ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ -Vishwanews24

ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರಿಡುವುದಾಗಿ ಹೇಳಿದ್ದರು. ಈ ಕುರಿತಂತೆ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಅಯೋಧ್ಯೆ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಡುವ ನಿರ್ಧಾರಕ್ಕೆ ಸಂಪುಟ ಸಭೆಯಲ್ಲಿ ಒಕ್ಕೊರಲಿನಿಂದ ಸಮ್ಮತಿ ಸೂಚಿಸಲಾಗಿದೆ.

ಸಚಿವ ಸಂಪುಟದ ನಿರ್ಣಯ ಹಾಗೂ ಸಂಬಂಧಪಟ್ಟ ಕಾನೂನು ತಿದ್ದುಪಡಿಗಾಗಿ ಇದನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಕೇಂದ್ರ ಸಚಿವಾಲಯದಿಂದ ಒಪ್ಪಿಗೆ ದೊರೆತ ಬಳಿಕ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಲು ಯೋಗಿ ಆದಿತ್ಯನಾಥ ಸರಕಾರ ಸಿದ್ದತೆ ನಡೆಸಿದೆ.

ಒಪ್ಪಿಗೆ ದೊರೆತ ನಂತರ ಅಯೋಧ್ಯೆ ವಿಮಾನ ನಿಲ್ದಾಣದ ಹೆಸರನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ್‌ ವಿಮಾನ ನಿಲ್ದಾಣವೆಂದು ಬದಲಾಯಿಸಲಾಗುತ್ತದೆ.

ಆಗಷ್ಟ್ 5ರಂದು ಶ್ರೀರಾಮ ಮಂದಿರಕ್ಕೆ ಶಂಕು ಸ್ಥಾಪನೆಯಾದ ಬಳಿಕ ಅಯೋಧ್ಯೆಯಲ್ಲಿ ಮೂಲ ಸೌಕರ್ಯ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಎಂ ಯೋಗಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಈ ಮೂಲಕ ಪ್ರಮುಖ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಅಯೋಧ್ಯೆಯ ಹೆಸರು ಸೇರಿಸುವತ್ತ ಯೋಗಿ ಸರ್ಕಾರ ಕೆಲಸ ಮಾಡುತ್ತಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago