Featured

ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರು : ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ -Vishwanews24

ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರು : ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ -Vishwanews24

ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರಿಡುವುದಾಗಿ ಹೇಳಿದ್ದರು. ಈ ಕುರಿತಂತೆ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಅಯೋಧ್ಯೆ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಡುವ ನಿರ್ಧಾರಕ್ಕೆ ಸಂಪುಟ ಸಭೆಯಲ್ಲಿ ಒಕ್ಕೊರಲಿನಿಂದ ಸಮ್ಮತಿ ಸೂಚಿಸಲಾಗಿದೆ.

ಸಚಿವ ಸಂಪುಟದ ನಿರ್ಣಯ ಹಾಗೂ ಸಂಬಂಧಪಟ್ಟ ಕಾನೂನು ತಿದ್ದುಪಡಿಗಾಗಿ ಇದನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಕೇಂದ್ರ ಸಚಿವಾಲಯದಿಂದ ಒಪ್ಪಿಗೆ ದೊರೆತ ಬಳಿಕ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಲು ಯೋಗಿ ಆದಿತ್ಯನಾಥ ಸರಕಾರ ಸಿದ್ದತೆ ನಡೆಸಿದೆ.

ಒಪ್ಪಿಗೆ ದೊರೆತ ನಂತರ ಅಯೋಧ್ಯೆ ವಿಮಾನ ನಿಲ್ದಾಣದ ಹೆಸರನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ್‌ ವಿಮಾನ ನಿಲ್ದಾಣವೆಂದು ಬದಲಾಯಿಸಲಾಗುತ್ತದೆ.

ಆಗಷ್ಟ್ 5ರಂದು ಶ್ರೀರಾಮ ಮಂದಿರಕ್ಕೆ ಶಂಕು ಸ್ಥಾಪನೆಯಾದ ಬಳಿಕ ಅಯೋಧ್ಯೆಯಲ್ಲಿ ಮೂಲ ಸೌಕರ್ಯ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಎಂ ಯೋಗಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಈ ಮೂಲಕ ಪ್ರಮುಖ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಅಯೋಧ್ಯೆಯ ಹೆಸರು ಸೇರಿಸುವತ್ತ ಯೋಗಿ ಸರ್ಕಾರ ಕೆಲಸ ಮಾಡುತ್ತಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago