ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್ ಶ್ರೀರಾಮನ ಹೆಸರಿಡುವುದಾಗಿ ಹೇಳಿದ್ದರು. ಈ ಕುರಿತಂತೆ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಅಯೋಧ್ಯೆ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಡುವ ನಿರ್ಧಾರಕ್ಕೆ ಸಂಪುಟ ಸಭೆಯಲ್ಲಿ ಒಕ್ಕೊರಲಿನಿಂದ ಸಮ್ಮತಿ ಸೂಚಿಸಲಾಗಿದೆ.
ಸಚಿವ ಸಂಪುಟದ ನಿರ್ಣಯ ಹಾಗೂ ಸಂಬಂಧಪಟ್ಟ ಕಾನೂನು ತಿದ್ದುಪಡಿಗಾಗಿ ಇದನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಕೇಂದ್ರ ಸಚಿವಾಲಯದಿಂದ ಒಪ್ಪಿಗೆ ದೊರೆತ ಬಳಿಕ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಲು ಯೋಗಿ ಆದಿತ್ಯನಾಥ ಸರಕಾರ ಸಿದ್ದತೆ ನಡೆಸಿದೆ.
ಒಪ್ಪಿಗೆ ದೊರೆತ ನಂತರ ಅಯೋಧ್ಯೆ ವಿಮಾನ ನಿಲ್ದಾಣದ ಹೆಸರನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ್ ವಿಮಾನ ನಿಲ್ದಾಣವೆಂದು ಬದಲಾಯಿಸಲಾಗುತ್ತದೆ.
ಆಗಷ್ಟ್ 5ರಂದು ಶ್ರೀರಾಮ ಮಂದಿರಕ್ಕೆ ಶಂಕು ಸ್ಥಾಪನೆಯಾದ ಬಳಿಕ ಅಯೋಧ್ಯೆಯಲ್ಲಿ ಮೂಲ ಸೌಕರ್ಯ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಎಂ ಯೋಗಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಈ ಮೂಲಕ ಪ್ರಮುಖ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಅಯೋಧ್ಯೆಯ ಹೆಸರು ಸೇರಿಸುವತ್ತ ಯೋಗಿ ಸರ್ಕಾರ ಕೆಲಸ ಮಾಡುತ್ತಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…