ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್ ಶ್ರೀರಾಮನ ಹೆಸರಿಡುವುದಾಗಿ ಹೇಳಿದ್ದರು. ಈ ಕುರಿತಂತೆ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಅಯೋಧ್ಯೆ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಡುವ ನಿರ್ಧಾರಕ್ಕೆ ಸಂಪುಟ ಸಭೆಯಲ್ಲಿ ಒಕ್ಕೊರಲಿನಿಂದ ಸಮ್ಮತಿ ಸೂಚಿಸಲಾಗಿದೆ.
ಸಚಿವ ಸಂಪುಟದ ನಿರ್ಣಯ ಹಾಗೂ ಸಂಬಂಧಪಟ್ಟ ಕಾನೂನು ತಿದ್ದುಪಡಿಗಾಗಿ ಇದನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಕೇಂದ್ರ ಸಚಿವಾಲಯದಿಂದ ಒಪ್ಪಿಗೆ ದೊರೆತ ಬಳಿಕ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಲು ಯೋಗಿ ಆದಿತ್ಯನಾಥ ಸರಕಾರ ಸಿದ್ದತೆ ನಡೆಸಿದೆ.
ಒಪ್ಪಿಗೆ ದೊರೆತ ನಂತರ ಅಯೋಧ್ಯೆ ವಿಮಾನ ನಿಲ್ದಾಣದ ಹೆಸರನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ್ ವಿಮಾನ ನಿಲ್ದಾಣವೆಂದು ಬದಲಾಯಿಸಲಾಗುತ್ತದೆ.
ಆಗಷ್ಟ್ 5ರಂದು ಶ್ರೀರಾಮ ಮಂದಿರಕ್ಕೆ ಶಂಕು ಸ್ಥಾಪನೆಯಾದ ಬಳಿಕ ಅಯೋಧ್ಯೆಯಲ್ಲಿ ಮೂಲ ಸೌಕರ್ಯ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಎಂ ಯೋಗಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಈ ಮೂಲಕ ಪ್ರಮುಖ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಅಯೋಧ್ಯೆಯ ಹೆಸರು ಸೇರಿಸುವತ್ತ ಯೋಗಿ ಸರ್ಕಾರ ಕೆಲಸ ಮಾಡುತ್ತಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…