ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸರಯೂ ನದಿಯ ದಂಡೆಯಲ್ಲಿರುವ ಘಾಟ್ಗಳ ಸರಣಿ ರಾಮ್ ಕಿ ಪೈಡಿಯಲ್ಲಿ ಸ್ನಾನ ಮಾಡುವಾಗ ಸಾರ್ವಜನಿಕವಾಗಿ ಪತ್ನಿಗೆ ಮುತ್ತಿಟ್ಟ ವ್ಯಕ್ತಿಯನ್ನು ಪಕ್ಕದಲ್ಲೇ ಇದ್ದ ಜನರ ಗುಂಪು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತಮ್ಮ ಸುತ್ತಮುತ್ತ ಜನರಿದ್ದರು ಘಾಟ್ನಲ್ಲಿ ಸ್ನಾನ ಮಾಡುತ್ತಿದ್ದ ದಂಪತಿ ಪರಸ್ಪರ ಚುಂಬಿಸುವುದನ್ನು ನೋಡಿದ ವ್ಯಕ್ತಿಯೊಬ್ಬ ಮಹಿಳೆಯ ಗಂಡನನ್ನು ಎಳೆದುಕೊಂಡು ಹೊಡೆಯಲು ಆರಂಭಿಸುತ್ತಾನೆ. ಈ ವೇಳೆ ಅಲ್ಲಿದ್ದ ಜನರೆಲ್ಲ ಸೇರಿ ಆತನ ಮೇಲೆ ಹಲ್ಲೆ ಮಾಡುವಾಗ ತನ್ನ ಗಂಡನ ಮೇಲೆ ಹಲ್ಲೆ ಮಾಡದಂತೆ ಪತ್ನಿ ತಡೆಯಲು ಯತ್ನಿಸುತ್ತಾಳೆ. ಇಬ್ಬರನ್ನು ನೀರಿನಿಂದ ಹೊರಗೆಳೆದು ಮಹಿಳೆಯ ಗಂಡನನ್ನು ಸುತ್ತುವರಿದು ಹಲ್ಲೆ ಮಾಡುತ್ತಾರೆ. ಇದಿಷ್ಟನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದೆ.
ವಿಡಿಯೋವನ್ನು ಅಶೋಕ್ ಸ್ವೈನ್ ಎಂಬುವರು ಶೇರ್ ಮಾಡಿಕೊಂಡಿದ್ದಾರೆ. ಈ ವ್ಯಕ್ತಿ ತನ್ನ ಹೆಂಡತಿಗೆ ಮುತ್ತು ನೀಡಿ ತಪ್ಪು ಮಾಡಿಬಿಟ್ಟ. ಅಯೋಧ್ಯೆಯಲ್ಲಿರುವ ರಾಮಭಕ್ತರು ಹಲ್ಲೆಗೊಳಗಾದ ವ್ಯಕ್ತಿಜಯ ಪತ್ನಿಯ ಜತೆ ಅಸಭ್ಯವಾಗಿ ವರ್ತಿಸಿ, ವ್ಯಕ್ತಿಯನ್ನು ಥಳಿಸಿದ್ದಾರೆ, ಮುತ್ತಿಡುವುದು ಭಾರತೀಯ ಸಂಸ್ಕೃತಿಯಲ್ಲವಂತೆ. ಆದರೆ, ಗುಂಪು ಹಲ್ಲೆ ಸಂಸ್ಕೃತಿಯಲ್ಲಿ ಒಂದಂತೆ ಎಂದು ಅಶೋಕ್ ಸ್ವೈನ್ ಎಂಬುವರು ಟೀಕಿಸಿದ್ದಾರೆ.
ಈ ಘಟನೆಯ ಬಗ್ಗೆ ಮಾತನಾಡಿರುವ ಅಯೋಧ್ಯೆಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಶೈಲೇಶ್ ಪಾಂಡೆ, ಈ ವಿಡಿಯೋ ಒಂದು ವಾರ ಹಳೆಯದಾಗಿದೆ ಮತ್ತು ಈ ವಿಷಯದಲ್ಲಿ ನಮಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಈಗ ದಂಪತಿಗಳು ಎಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಕ್ರಮ ತೆಗೆದುಕೊಳ್ಳಲು ಬಯಸಿದರೆ ಅವರು ದೂರು ದಾಖಲಿಸಬಹುದು ಎಂದಿದ್ದಾರೆ
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…