ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸರಯೂ ನದಿಯ ದಂಡೆಯಲ್ಲಿರುವ ಘಾಟ್ಗಳ ಸರಣಿ ರಾಮ್ ಕಿ ಪೈಡಿಯಲ್ಲಿ ಸ್ನಾನ ಮಾಡುವಾಗ ಸಾರ್ವಜನಿಕವಾಗಿ ಪತ್ನಿಗೆ ಮುತ್ತಿಟ್ಟ ವ್ಯಕ್ತಿಯನ್ನು ಪಕ್ಕದಲ್ಲೇ ಇದ್ದ ಜನರ ಗುಂಪು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತಮ್ಮ ಸುತ್ತಮುತ್ತ ಜನರಿದ್ದರು ಘಾಟ್ನಲ್ಲಿ ಸ್ನಾನ ಮಾಡುತ್ತಿದ್ದ ದಂಪತಿ ಪರಸ್ಪರ ಚುಂಬಿಸುವುದನ್ನು ನೋಡಿದ ವ್ಯಕ್ತಿಯೊಬ್ಬ ಮಹಿಳೆಯ ಗಂಡನನ್ನು ಎಳೆದುಕೊಂಡು ಹೊಡೆಯಲು ಆರಂಭಿಸುತ್ತಾನೆ. ಈ ವೇಳೆ ಅಲ್ಲಿದ್ದ ಜನರೆಲ್ಲ ಸೇರಿ ಆತನ ಮೇಲೆ ಹಲ್ಲೆ ಮಾಡುವಾಗ ತನ್ನ ಗಂಡನ ಮೇಲೆ ಹಲ್ಲೆ ಮಾಡದಂತೆ ಪತ್ನಿ ತಡೆಯಲು ಯತ್ನಿಸುತ್ತಾಳೆ. ಇಬ್ಬರನ್ನು ನೀರಿನಿಂದ ಹೊರಗೆಳೆದು ಮಹಿಳೆಯ ಗಂಡನನ್ನು ಸುತ್ತುವರಿದು ಹಲ್ಲೆ ಮಾಡುತ್ತಾರೆ. ಇದಿಷ್ಟನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದೆ.
ವಿಡಿಯೋವನ್ನು ಅಶೋಕ್ ಸ್ವೈನ್ ಎಂಬುವರು ಶೇರ್ ಮಾಡಿಕೊಂಡಿದ್ದಾರೆ. ಈ ವ್ಯಕ್ತಿ ತನ್ನ ಹೆಂಡತಿಗೆ ಮುತ್ತು ನೀಡಿ ತಪ್ಪು ಮಾಡಿಬಿಟ್ಟ. ಅಯೋಧ್ಯೆಯಲ್ಲಿರುವ ರಾಮಭಕ್ತರು ಹಲ್ಲೆಗೊಳಗಾದ ವ್ಯಕ್ತಿಜಯ ಪತ್ನಿಯ ಜತೆ ಅಸಭ್ಯವಾಗಿ ವರ್ತಿಸಿ, ವ್ಯಕ್ತಿಯನ್ನು ಥಳಿಸಿದ್ದಾರೆ, ಮುತ್ತಿಡುವುದು ಭಾರತೀಯ ಸಂಸ್ಕೃತಿಯಲ್ಲವಂತೆ. ಆದರೆ, ಗುಂಪು ಹಲ್ಲೆ ಸಂಸ್ಕೃತಿಯಲ್ಲಿ ಒಂದಂತೆ ಎಂದು ಅಶೋಕ್ ಸ್ವೈನ್ ಎಂಬುವರು ಟೀಕಿಸಿದ್ದಾರೆ.
ಈ ಘಟನೆಯ ಬಗ್ಗೆ ಮಾತನಾಡಿರುವ ಅಯೋಧ್ಯೆಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಶೈಲೇಶ್ ಪಾಂಡೆ, ಈ ವಿಡಿಯೋ ಒಂದು ವಾರ ಹಳೆಯದಾಗಿದೆ ಮತ್ತು ಈ ವಿಷಯದಲ್ಲಿ ನಮಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಈಗ ದಂಪತಿಗಳು ಎಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಕ್ರಮ ತೆಗೆದುಕೊಳ್ಳಲು ಬಯಸಿದರೆ ಅವರು ದೂರು ದಾಖಲಿಸಬಹುದು ಎಂದಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…