ಮಂಗಳೂರು:ಅಯೋಧ್ಯೆ ವಿವಾದಕ್ಕೆ ಸುಪ್ರೀಂಕೋರ್ಟ್, ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ನ ಸಂವಿಧಾನಿಕ ಪಂಚಪೀಠವೂ ಸಿಜೆಐ ಗೋಗೊಯಿ, ಜಸ್ಟೀಸ್ ಎಸ್ ಎ ಬೋಬ್ಡೆ, ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಅಬ್ದುಲ್ ನಝೀರ್ ಸದಸ್ಯರನ್ನು ಒಳಗೊಂಡಿದೆ.
ಪಂಚಪೀಠದ ಸದಸ್ಯರಲ್ಲಿ ಒಬ್ಬರಾಗಿರುವ ನ್ಯಾ. ಅಬ್ದುಲ್ ನಜೀರ್ ಕರಾವಳಿಯವರು. ನ್ಯಾಯಮೂರ್ತಿ ಅಬ್ದುಲ್ ನಜೀರ್ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಸಮೀಪದ ಬೆಳುವಾಯಿ ಗ್ರಾಮದವರು.
ಜ. 5, 1958ರ ಜನವರಿ ಐದರಂದು ಜನಿಸಿದ ಎಸ್ ಎ ನಜೀರ್ ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದರು. ನಂತರ ಮಂಗಳೂರಿನ ಎಸ್ ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ಧಾರೆ.
1983ರಲ್ಲಿ ಅಬ್ದುಲ್ ನಜೀರ್ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಅಭ್ಯಾಸ ಆರಂಭಿಸಿದರು.
2003ರಲ್ಲಿ ಹೈಕೋರ್ಟ್ ನ ಜಡ್ಜಾಗಿ ಆಯ್ಕೆಯಾದ ಇವರು 2017ರಲ್ಲಿ ಸುಪ್ರೀಂ ಕೋರ್ಟ್ ಜಡ್ಜ್ ಆಗಿ ನೇಮಕವಾಗಿದ್ದರು. ಐತಿಹಾಸಿಕ ತ್ರಿವಳಿ ತಲಾಖ್ ಪ್ರಕರಣದ ಪಂಚ ಸದಸ್ಯ ಪೀಠದ ಏಕಮಾತ್ರ ಮುಸ್ಲಿಂ ನ್ಯಾಯಾಧೀಶರಾಗಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…