Featured

ಅಯೋಧ್ಯೆ ಗರ್ಭಗುಡಿಯ ಪೀಠದ ಮೇಲೆ ಬಾಲರಾಮ : ಮೊದಲ ಚಿತ್ರ ವೈರಲ್‌ – vishwanews24

ಅಯೋಧ್ಯೆ ಗರ್ಭಗುಡಿಯ ಪೀಠದ ಮೇಲೆ ಬಾಲರಾಮ : ಮೊದಲ ಚಿತ್ರ ವೈರಲ್‌

ಅಯೋಧ್ಯೆ : ಭವ್ಯವಾದ ಶ್ರೀರಾಮಮಂದಿರದ ಗರ್ಭಗುಡಿಯ ಪೀಠದ ಮೇಲೆ ಬಾಲರಾಮನ (ರಾಮಲಲ್ಲಾ) ನೂತನ ವಿಗ್ರಹವನ್ನು ಗುರುವಾರ‌ ಇರಿಸಲಾಗಿದೆ.

ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ಅವರು ಸಮಗ್ರ ಪ್ರಕ್ರಿಯೆಯ ನಂತರ ವಿಗ್ರಹವನ್ನು ಆಯ್ಕೆ ಮಾಡಿದ್ದಾರೆ. ಗರ್ಭಗುಡಿಯ ಪೀಠದಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮನ ಮೂರ್ತಿ ಚಿತ್ರ ಬಿಡುಗಡೆಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೃಷ್ಣಶಿಲೆಯಿಂದ ಕೆತ್ತನೆ ಮಾಡಿದ ಸುಮಾರು 150-200 ಕೆಜಿ ತೂಕದ ಈ ವಿಗ್ರಹವನ್ನು ಬುಧವಾರ ಸಂಜೆ ಬಿಗಿ ಭದ್ರತೆಯ ಮೂಲಕ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ತರಲಾಗಿತ್ತು.

ಗುರುವಾರ ಸಂಜೆ ವೇಳೆಗೆ ಧಾರ್ಮಿಕ ವಿಧಿ ವಿಧಾನಗಳು ನೇರವೇರಿದ ಬಳಿಕ ಕೃಷ್ಣಶಿಲೆಯಲ್ಲಿ ಮೂಡಿದ 5 ವರ್ಷದ ರಾಮನ 51 ಇಂಚು ಎತ್ತರದ ಬಾಲರಾಮನ ಮೂರ್ತಿಯನ್ನ ಪ್ರತಿಷ್ಠಾಪಿಸಲಾಯಿತು. ಜನವರಿ 22ರಂದು ರಾಮಭಕ್ತರು ಇದರ ರೂಪ ಕಣ್ತುಂಬಿಕೊಳ್ಳುವ ಸಮಯ ಮತ್ತಷ್ಟು ಸನ್ನಿಹಿತವಾದಂತಾಗಿದೆ. ಅಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಲಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago